ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು.
ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ ಬಳಗದ ವತಿಯಿಂದ ಹಿರಿಯ ಪತ್ರಕರ್ತ ಸಂಪತ್ ಅಯ್ಯಂಗಾರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಎಂಬುದು ಇಂದು ಅಂಗಡಿಯಲ್ಲಿ ವ್ಯಾಪಾರ ಮಾಡುವ ಸರಕಾಗಿದೆ.
ಮತದಾನ ಎಂಬುದು ಹಣಕೊಟ್ಟು ಕೊಂಡುಕೊಳ್ಳುವ ವಸ್ತುವಾಗಿರುವುದು ಪ್ರಜಾಪ್ರಭುತ್ವದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.
ಸಂಪತ್ ಅಯ್ಯಂಗಾರ್ ಅವರು ಐದು ಬಾರಿ ಪುರಸಭೆಯ ಸದಸ್ಯರು ಮತ್ತು ಒಂದು ಬಾರಿ ನಗರಸಭೆ ಉಪಾಧ್ಯಕ್ಷರಾಗಿದ್ದವರು, ಎಂದೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿದವರಲ್ಲ, ಜನಪರವಾಗಿದ್ದ ಅವರು ನೂರಾರು ಶವಗಳ ಸಂಸ್ಕಾರ ಮಾಡಿದ್ದರು, ದೀನ ದಲಿತರ ಪರ ನಿರಂತರ ಕಾಳಜಿ ಇದ್ದ ಅವರು ಹಲವಾರು ದಲಿತ ಯುವಕರ ಬೌದ್ಧಿಕ ಮತ್ತು ಆರ್ಥಿಕವಾಗಿ ಬೆಳೆಸಿದ್ದರು ಎಂದರು.
ಎಂ.ಎಸ್.ಸಂಪತ್ ಅಯ್ಯಂಗಾರ್ ಇನ್ನಿಲ್ಲ ಎಂದಾಗ ನಮ್ಮೊಳಗಿನ ಚೈತನ್ಯ, ಬೆಳಕು ಉತ್ಸಾಹ ಕುಂದಿತು ಎಂದು ಹೇಳುವವರಿಗೆ ಲೆಕ್ಕವಿಲ್ಲ. ಜನರಿಗೆ ಗುರು, ಗೆಳೆಯ, ಮಾರ್ಗದರ್ಶಿಯಂತಿದ್ದ ಅವರು ಒಡನಾಡಿಗಳ ಪಾಲಿಗೆ ಅಕ್ಷಯ ನಿಧಿಯಂತಿದ್ದರು, ಸಮಾಜ ಕಾಯಕ, ಸಂಗೀತ, ಸಾಹಿತ್ಯ, ಪತ್ರಿಕೋದ್ಯಮ, ಅನುವಾದ, ಬೋಧನೆಯನ್ನು ಅವರು ಶ್ರದ್ಧೆ ಇರುವವರಿಗೆಲ್ಲಾ ಧಾರೆ ಎರೆದವರು ಎಂದರು.
ನಿವೃತ್ತ ಪ್ರಾಧ್ಯಾಪಕ ಎಸ್.ನಾರಾಯಣ್ ಅವರು ಮಾತನಾಡಿ ಸಂಪತ್ ಅಯ್ಯಂಗಾರ್ ಅವರು ಆತ್ಮವಿಶ್ವಾಸದ ಪ್ರತೀಕದಂತಿದ್ದರು, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಒಂದು ವರ್ಷಗಳ ಕಾಲ ಯಾವುದೇ ಸಂಭಾವನೆ ಪಡೆಯದೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು.
ಬಹುಮುಖ ಪ್ರತಿಭೆಯ ಸಂಪತ್ ಅಯ್ಯಂಗಾರ್ ಅವರು ಸಂಗೀತ ಪ್ರೇಮಿಯಾಗಿದ್ದರು, ದೊಡ್ಡಬಳ್ಳಾಪುರದಲ್ಲಿ ಸಂಗೀತ ಅಭಿಮಾನಿಗಳ ಒಗ್ಗೂಡಿಸಿ ಸುಸ್ವರ ಎಂಬ ತಂಡವನ್ನು ಕಟ್ಟಿ ರಾಷ್ಟ್ರೀಯ ಮಟ್ಟದ ಸಂಗೀತ ವಿದೂಷಿಗಳನ್ನು ಕರೆಸಿ ಸಂಗೀತ ಕಚೇರಿಗಳನ್ನು ನಡೆಸುತ್ತಿದ್ದರು.
ಸಂಗೀತದ ಬರಹ ಸೇರಿದಂತೆ ಹಲವಾರು ವಿಚಾರಗಳ ಮೇಲೆ ಪಾಂಡಿತ್ಯ ಹೊಂದಿದ್ದ ಅವರ ಕೆಲವು ಪುಸ್ತಕಗಳು ಆಂಗ್ಲ ಭಾಷೆಗೆ ಅನುವಾದಗೊಂಡಿದ್ದು, ದೊಡ್ಡಬಳ್ಳಾಪುರದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದವರು ಎಂದರು.
ಈ ವೇಳೆ ನಿವೃತ್ತ ಪ್ರಾಧ್ಯಾಪಕ ಎ.ಓ.ಆವಲಮೂರ್ತಿ, ನಿವೃತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ, ತ.ನ.ಪ್ರಭುದೇವ್, ವಕೀಲರಾದ ಆರೂಡಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…