‘ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ’-ಕೆ.ವೆಂಕಟೇಶ್

ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ ಬಳಗದ ವತಿಯಿಂದ ಹಿರಿಯ ಪತ್ರಕರ್ತ ಸಂಪತ್ ಅಯ್ಯಂಗಾರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಎಂಬುದು ಇಂದು ಅಂಗಡಿಯಲ್ಲಿ ವ್ಯಾಪಾರ ಮಾಡುವ ಸರಕಾಗಿದೆ.

ಮತದಾನ ಎಂಬುದು ಹಣಕೊಟ್ಟು ಕೊಂಡುಕೊಳ್ಳುವ ವಸ್ತುವಾಗಿರುವುದು ಪ್ರಜಾಪ್ರಭುತ್ವದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ಸಂಪತ್ ಅಯ್ಯಂಗಾರ್ ಅವರು ಐದು ಬಾರಿ ಪುರಸಭೆಯ ಸದಸ್ಯರು ಮತ್ತು ಒಂದು ಬಾರಿ ನಗರಸಭೆ ಉಪಾಧ್ಯಕ್ಷರಾಗಿದ್ದವರು, ಎಂದೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿದವರಲ್ಲ, ಜನಪರವಾಗಿದ್ದ ಅವರು ನೂರಾರು ಶವಗಳ ಸಂಸ್ಕಾರ ಮಾಡಿದ್ದರು, ದೀನ ದಲಿತರ ಪರ ನಿರಂತರ ಕಾಳಜಿ ಇದ್ದ ಅವರು ಹಲವಾರು ದಲಿತ ಯುವಕರ ಬೌದ್ಧಿಕ ಮತ್ತು ಆರ್ಥಿಕವಾಗಿ ಬೆಳೆಸಿದ್ದರು ಎಂದರು.

ಎಂ.ಎಸ್.ಸಂಪತ್ ಅಯ್ಯಂಗಾರ್ ಇನ್ನಿಲ್ಲ ಎಂದಾಗ ನಮ್ಮೊಳಗಿನ ಚೈತನ್ಯ, ಬೆಳಕು ಉತ್ಸಾಹ ಕುಂದಿತು ಎಂದು ಹೇಳುವವರಿಗೆ ಲೆಕ್ಕವಿಲ್ಲ. ಜನರಿಗೆ ಗುರು, ಗೆಳೆಯ, ಮಾರ್ಗದರ್ಶಿಯಂತಿದ್ದ ಅವರು ಒಡನಾಡಿಗಳ ಪಾಲಿಗೆ ಅಕ್ಷಯ ನಿಧಿಯಂತಿದ್ದರು, ಸಮಾಜ ಕಾಯಕ, ಸಂಗೀತ, ಸಾಹಿತ್ಯ, ಪತ್ರಿಕೋದ್ಯಮ, ಅನುವಾದ, ಬೋಧನೆಯನ್ನು ಅವರು ಶ್ರದ್ಧೆ ಇರುವವರಿಗೆಲ್ಲಾ ಧಾರೆ ಎರೆದವರು ಎಂದರು.

ನಿವೃತ್ತ ಪ್ರಾಧ್ಯಾಪಕ ಎಸ್.ನಾರಾಯಣ್ ಅವರು ಮಾತನಾಡಿ ಸಂಪತ್ ಅಯ್ಯಂಗಾರ್ ಅವರು ಆತ್ಮವಿಶ್ವಾಸದ ಪ್ರತೀಕದಂತಿದ್ದರು, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಒಂದು ವರ್ಷಗಳ ಕಾಲ ಯಾವುದೇ ಸಂಭಾವನೆ ಪಡೆಯದೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು.

ಬಹುಮುಖ ಪ್ರತಿಭೆಯ ಸಂಪತ್ ಅಯ್ಯಂಗಾರ್ ಅವರು ಸಂಗೀತ ಪ್ರೇಮಿಯಾಗಿದ್ದರು, ದೊಡ್ಡಬಳ್ಳಾಪುರದಲ್ಲಿ ಸಂಗೀತ ಅಭಿಮಾನಿಗಳ ಒಗ್ಗೂಡಿಸಿ ಸುಸ್ವರ ಎಂಬ ತಂಡವನ್ನು ಕಟ್ಟಿ ರಾಷ್ಟ್ರೀಯ ಮಟ್ಟದ ಸಂಗೀತ ವಿದೂಷಿಗಳನ್ನು ಕರೆಸಿ ಸಂಗೀತ ಕಚೇರಿಗಳನ್ನು ನಡೆಸುತ್ತಿದ್ದರು.

ಸಂಗೀತದ ಬರಹ ಸೇರಿದಂತೆ ಹಲವಾರು ವಿಚಾರಗಳ ಮೇಲೆ ಪಾಂಡಿತ್ಯ ಹೊಂದಿದ್ದ ಅವರ ಕೆಲವು ಪುಸ್ತಕಗಳು ಆಂಗ್ಲ ಭಾಷೆಗೆ ಅನುವಾದಗೊಂಡಿದ್ದು, ದೊಡ್ಡಬಳ್ಳಾಪುರದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದವರು ಎಂದರು.

ಈ ವೇಳೆ ನಿವೃತ್ತ ಪ್ರಾಧ್ಯಾಪಕ ಎ.ಓ.ಆವಲಮೂರ್ತಿ, ನಿವೃತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ, ತ.ನ.ಪ್ರಭುದೇವ್, ವಕೀಲರಾದ ಆರೂಡಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago