ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು.
ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ ಬಳಗದ ವತಿಯಿಂದ ಹಿರಿಯ ಪತ್ರಕರ್ತ ಸಂಪತ್ ಅಯ್ಯಂಗಾರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಎಂಬುದು ಇಂದು ಅಂಗಡಿಯಲ್ಲಿ ವ್ಯಾಪಾರ ಮಾಡುವ ಸರಕಾಗಿದೆ.
ಮತದಾನ ಎಂಬುದು ಹಣಕೊಟ್ಟು ಕೊಂಡುಕೊಳ್ಳುವ ವಸ್ತುವಾಗಿರುವುದು ಪ್ರಜಾಪ್ರಭುತ್ವದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.
ಸಂಪತ್ ಅಯ್ಯಂಗಾರ್ ಅವರು ಐದು ಬಾರಿ ಪುರಸಭೆಯ ಸದಸ್ಯರು ಮತ್ತು ಒಂದು ಬಾರಿ ನಗರಸಭೆ ಉಪಾಧ್ಯಕ್ಷರಾಗಿದ್ದವರು, ಎಂದೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿದವರಲ್ಲ, ಜನಪರವಾಗಿದ್ದ ಅವರು ನೂರಾರು ಶವಗಳ ಸಂಸ್ಕಾರ ಮಾಡಿದ್ದರು, ದೀನ ದಲಿತರ ಪರ ನಿರಂತರ ಕಾಳಜಿ ಇದ್ದ ಅವರು ಹಲವಾರು ದಲಿತ ಯುವಕರ ಬೌದ್ಧಿಕ ಮತ್ತು ಆರ್ಥಿಕವಾಗಿ ಬೆಳೆಸಿದ್ದರು ಎಂದರು.
ಎಂ.ಎಸ್.ಸಂಪತ್ ಅಯ್ಯಂಗಾರ್ ಇನ್ನಿಲ್ಲ ಎಂದಾಗ ನಮ್ಮೊಳಗಿನ ಚೈತನ್ಯ, ಬೆಳಕು ಉತ್ಸಾಹ ಕುಂದಿತು ಎಂದು ಹೇಳುವವರಿಗೆ ಲೆಕ್ಕವಿಲ್ಲ. ಜನರಿಗೆ ಗುರು, ಗೆಳೆಯ, ಮಾರ್ಗದರ್ಶಿಯಂತಿದ್ದ ಅವರು ಒಡನಾಡಿಗಳ ಪಾಲಿಗೆ ಅಕ್ಷಯ ನಿಧಿಯಂತಿದ್ದರು, ಸಮಾಜ ಕಾಯಕ, ಸಂಗೀತ, ಸಾಹಿತ್ಯ, ಪತ್ರಿಕೋದ್ಯಮ, ಅನುವಾದ, ಬೋಧನೆಯನ್ನು ಅವರು ಶ್ರದ್ಧೆ ಇರುವವರಿಗೆಲ್ಲಾ ಧಾರೆ ಎರೆದವರು ಎಂದರು.
ನಿವೃತ್ತ ಪ್ರಾಧ್ಯಾಪಕ ಎಸ್.ನಾರಾಯಣ್ ಅವರು ಮಾತನಾಡಿ ಸಂಪತ್ ಅಯ್ಯಂಗಾರ್ ಅವರು ಆತ್ಮವಿಶ್ವಾಸದ ಪ್ರತೀಕದಂತಿದ್ದರು, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಒಂದು ವರ್ಷಗಳ ಕಾಲ ಯಾವುದೇ ಸಂಭಾವನೆ ಪಡೆಯದೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು.
ಬಹುಮುಖ ಪ್ರತಿಭೆಯ ಸಂಪತ್ ಅಯ್ಯಂಗಾರ್ ಅವರು ಸಂಗೀತ ಪ್ರೇಮಿಯಾಗಿದ್ದರು, ದೊಡ್ಡಬಳ್ಳಾಪುರದಲ್ಲಿ ಸಂಗೀತ ಅಭಿಮಾನಿಗಳ ಒಗ್ಗೂಡಿಸಿ ಸುಸ್ವರ ಎಂಬ ತಂಡವನ್ನು ಕಟ್ಟಿ ರಾಷ್ಟ್ರೀಯ ಮಟ್ಟದ ಸಂಗೀತ ವಿದೂಷಿಗಳನ್ನು ಕರೆಸಿ ಸಂಗೀತ ಕಚೇರಿಗಳನ್ನು ನಡೆಸುತ್ತಿದ್ದರು.
ಸಂಗೀತದ ಬರಹ ಸೇರಿದಂತೆ ಹಲವಾರು ವಿಚಾರಗಳ ಮೇಲೆ ಪಾಂಡಿತ್ಯ ಹೊಂದಿದ್ದ ಅವರ ಕೆಲವು ಪುಸ್ತಕಗಳು ಆಂಗ್ಲ ಭಾಷೆಗೆ ಅನುವಾದಗೊಂಡಿದ್ದು, ದೊಡ್ಡಬಳ್ಳಾಪುರದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದವರು ಎಂದರು.
ಈ ವೇಳೆ ನಿವೃತ್ತ ಪ್ರಾಧ್ಯಾಪಕ ಎ.ಓ.ಆವಲಮೂರ್ತಿ, ನಿವೃತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ, ತ.ನ.ಪ್ರಭುದೇವ್, ವಕೀಲರಾದ ಆರೂಡಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…