‘ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ’-ಕೆ.ವೆಂಕಟೇಶ್

ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ ಬಳಗದ ವತಿಯಿಂದ ಹಿರಿಯ ಪತ್ರಕರ್ತ ಸಂಪತ್ ಅಯ್ಯಂಗಾರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಎಂಬುದು ಇಂದು ಅಂಗಡಿಯಲ್ಲಿ ವ್ಯಾಪಾರ ಮಾಡುವ ಸರಕಾಗಿದೆ.

ಮತದಾನ ಎಂಬುದು ಹಣಕೊಟ್ಟು ಕೊಂಡುಕೊಳ್ಳುವ ವಸ್ತುವಾಗಿರುವುದು ಪ್ರಜಾಪ್ರಭುತ್ವದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ಸಂಪತ್ ಅಯ್ಯಂಗಾರ್ ಅವರು ಐದು ಬಾರಿ ಪುರಸಭೆಯ ಸದಸ್ಯರು ಮತ್ತು ಒಂದು ಬಾರಿ ನಗರಸಭೆ ಉಪಾಧ್ಯಕ್ಷರಾಗಿದ್ದವರು, ಎಂದೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿದವರಲ್ಲ, ಜನಪರವಾಗಿದ್ದ ಅವರು ನೂರಾರು ಶವಗಳ ಸಂಸ್ಕಾರ ಮಾಡಿದ್ದರು, ದೀನ ದಲಿತರ ಪರ ನಿರಂತರ ಕಾಳಜಿ ಇದ್ದ ಅವರು ಹಲವಾರು ದಲಿತ ಯುವಕರ ಬೌದ್ಧಿಕ ಮತ್ತು ಆರ್ಥಿಕವಾಗಿ ಬೆಳೆಸಿದ್ದರು ಎಂದರು.

ಎಂ.ಎಸ್.ಸಂಪತ್ ಅಯ್ಯಂಗಾರ್ ಇನ್ನಿಲ್ಲ ಎಂದಾಗ ನಮ್ಮೊಳಗಿನ ಚೈತನ್ಯ, ಬೆಳಕು ಉತ್ಸಾಹ ಕುಂದಿತು ಎಂದು ಹೇಳುವವರಿಗೆ ಲೆಕ್ಕವಿಲ್ಲ. ಜನರಿಗೆ ಗುರು, ಗೆಳೆಯ, ಮಾರ್ಗದರ್ಶಿಯಂತಿದ್ದ ಅವರು ಒಡನಾಡಿಗಳ ಪಾಲಿಗೆ ಅಕ್ಷಯ ನಿಧಿಯಂತಿದ್ದರು, ಸಮಾಜ ಕಾಯಕ, ಸಂಗೀತ, ಸಾಹಿತ್ಯ, ಪತ್ರಿಕೋದ್ಯಮ, ಅನುವಾದ, ಬೋಧನೆಯನ್ನು ಅವರು ಶ್ರದ್ಧೆ ಇರುವವರಿಗೆಲ್ಲಾ ಧಾರೆ ಎರೆದವರು ಎಂದರು.

ನಿವೃತ್ತ ಪ್ರಾಧ್ಯಾಪಕ ಎಸ್.ನಾರಾಯಣ್ ಅವರು ಮಾತನಾಡಿ ಸಂಪತ್ ಅಯ್ಯಂಗಾರ್ ಅವರು ಆತ್ಮವಿಶ್ವಾಸದ ಪ್ರತೀಕದಂತಿದ್ದರು, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಒಂದು ವರ್ಷಗಳ ಕಾಲ ಯಾವುದೇ ಸಂಭಾವನೆ ಪಡೆಯದೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು.

ಬಹುಮುಖ ಪ್ರತಿಭೆಯ ಸಂಪತ್ ಅಯ್ಯಂಗಾರ್ ಅವರು ಸಂಗೀತ ಪ್ರೇಮಿಯಾಗಿದ್ದರು, ದೊಡ್ಡಬಳ್ಳಾಪುರದಲ್ಲಿ ಸಂಗೀತ ಅಭಿಮಾನಿಗಳ ಒಗ್ಗೂಡಿಸಿ ಸುಸ್ವರ ಎಂಬ ತಂಡವನ್ನು ಕಟ್ಟಿ ರಾಷ್ಟ್ರೀಯ ಮಟ್ಟದ ಸಂಗೀತ ವಿದೂಷಿಗಳನ್ನು ಕರೆಸಿ ಸಂಗೀತ ಕಚೇರಿಗಳನ್ನು ನಡೆಸುತ್ತಿದ್ದರು.

ಸಂಗೀತದ ಬರಹ ಸೇರಿದಂತೆ ಹಲವಾರು ವಿಚಾರಗಳ ಮೇಲೆ ಪಾಂಡಿತ್ಯ ಹೊಂದಿದ್ದ ಅವರ ಕೆಲವು ಪುಸ್ತಕಗಳು ಆಂಗ್ಲ ಭಾಷೆಗೆ ಅನುವಾದಗೊಂಡಿದ್ದು, ದೊಡ್ಡಬಳ್ಳಾಪುರದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದವರು ಎಂದರು.

ಈ ವೇಳೆ ನಿವೃತ್ತ ಪ್ರಾಧ್ಯಾಪಕ ಎ.ಓ.ಆವಲಮೂರ್ತಿ, ನಿವೃತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ, ತ.ನ.ಪ್ರಭುದೇವ್, ವಕೀಲರಾದ ಆರೂಡಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

10 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

15 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago