ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ- ಬಿಜೆಪಿ ಮುಖಂಡ ಸತೀಶ್

ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿದೆ.ಅಭಿವೃದ್ಧಿ ಗುರಿಯೊಂದಿಗೆ ಹಾಗೂ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಇಲ್ಲದ, ಸಮತೋಲಿತವಾಗಿದೆ ಬಿಜೆಪಿ ಮುಖಂಡ ಸತೀಶ್ ಹೇಳಿದ್ದಾರೆ.

ಈ ಬಜೆಟ್‌ ಯುವಜನತೆ, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ 500 ಕಂಪನಿಗಳಲ್ಲಿ 1 ಕೋಟಿ ಯುವಜನರಿಗೆ 12 ತಿಂಗಳ ಇಂಟರ್ನ್‌ಶಿಪ್ ಅವಕಾಶ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ 1 ತಿಂಗಳ ವೇತನದಂತಹ ಕ್ರಮಗಳು ಯುವಜನರಿಗೆ ಹೊಸ ಆಶಾಕಿರಣವನ್ನು ನೀಡಿದೆ ಎಂದರು.

ಮಹಿಳಾ ಉದ್ಯೋಗಿಗಳಿಗೆ ಸುಭದ್ರತೆ ಒದಗಿಸಲು ವಸತಿ ನಿಲಯಗಳನ್ನು ಆರಂಭಿಸುವುದಾಗಿ ಬಜೆಟ್‌ನಲ್ಲಿ ಹೇಳಿರುವುದು ಕೂಡ ಶ್ಲಾಘನೀಯವಾಗಿದ್ದು, ಔದ್ಯೋಗಿಕವಾಗಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಲಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

12 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

22 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

2 days ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago