ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ- ಬಿಜೆಪಿ ಮುಖಂಡ ಸತೀಶ್

ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿದೆ.ಅಭಿವೃದ್ಧಿ ಗುರಿಯೊಂದಿಗೆ ಹಾಗೂ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಇಲ್ಲದ, ಸಮತೋಲಿತವಾಗಿದೆ ಬಿಜೆಪಿ ಮುಖಂಡ ಸತೀಶ್ ಹೇಳಿದ್ದಾರೆ.

ಈ ಬಜೆಟ್‌ ಯುವಜನತೆ, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ 500 ಕಂಪನಿಗಳಲ್ಲಿ 1 ಕೋಟಿ ಯುವಜನರಿಗೆ 12 ತಿಂಗಳ ಇಂಟರ್ನ್‌ಶಿಪ್ ಅವಕಾಶ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ 1 ತಿಂಗಳ ವೇತನದಂತಹ ಕ್ರಮಗಳು ಯುವಜನರಿಗೆ ಹೊಸ ಆಶಾಕಿರಣವನ್ನು ನೀಡಿದೆ ಎಂದರು.

ಮಹಿಳಾ ಉದ್ಯೋಗಿಗಳಿಗೆ ಸುಭದ್ರತೆ ಒದಗಿಸಲು ವಸತಿ ನಿಲಯಗಳನ್ನು ಆರಂಭಿಸುವುದಾಗಿ ಬಜೆಟ್‌ನಲ್ಲಿ ಹೇಳಿರುವುದು ಕೂಡ ಶ್ಲಾಘನೀಯವಾಗಿದ್ದು, ಔದ್ಯೋಗಿಕವಾಗಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಲಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

12 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

18 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago