Categories: ಕೋಲಾರ

ಈ ಬಾರಿ ಬಲಗೈ ಸಮುದಾಯವು ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಅವರನ್ನು ಬೆಂಬಲಿಸಬೇಕೆಂದು ಮನವಿ

ಕೋಲಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗಳ ಬಲಗೈ ಸಮುದಾಯವನ್ನು ಕಾಂಗ್ರೆಸ್ ಪಕ್ಷವು ರಾಜಕೀಯಕ್ಕೆ ಮಾತ್ರ ಬಳಸಿಕೊಂಡು ನಿರಂತರವಾಗಿ ವಂಚನೆ ಮಾಡಿಕೊಂಡು ಬಂದಿದ್ದು, ಈ ಬಾರಿ ಬಲಗೈ ಸಮುದಾಯವು ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಅವರನ್ನು ಬೆಂಬಲಿಸಬೇಕೆಂದು ಜೆಡಿಎಸ್ ಮುಖಂಡ ಹಾಗೂ ಮಾಜಿ ಜಿಪಂ ಸದಸ್ಯ ಬಾಲಾಜಿ ಚನ್ನಯ್ಯ ಮನವಿ ಮಾಡಿದರು

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ-ಜೆಡಿಎಸ್ ಪಕ್ಷಗಳು ಬಲಗೈ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಿದೆ. ಆದರೆ ಕಾಂಗ್ರೆಸ್ ಸಮಾಜದಲ್ಲಿ ಜಾತಿ ರಾಜಕಾರಣವನ್ನು ಹುಟ್ಟಿ ಹಾಕಿ ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ಒಡಕು ಉಂಟು ಮಾಡಿದೆ ಎಂದು ದೂರಿದರು.

ಜೆಡಿಎಸ್ ಪಕ್ಷವು ಮುಳಬಾಗಿಲು ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ್, ಬಿಜೆಪಿ ಕೆಜಿಎಫ್‌ನಿಂದ ವೈ.ಸಂಪಂಗಿ, ವೈ.ರಾಮಕ್ಕ, ಹಿಂದಿನ ಚುನಾವಣೆಯಲ್ಲಿ ದಳದಿಂದ ಬಾಲಾಜಿ ಚನ್ನಯ್ಯ, ಬಿಜೆಪಿಯಿಂದ ಡಿ.ಎಸ್.ವೀರಯ್ಯ ಹೀಗೆ ಅನೇಕ ಮಂದಿಗೆ ಟಿಕೆಟ್ ನೀಡಿತ್ತು ಎಂದು ಮಾಹಿತಿ ನೀಡಿದರು.

ಸುಮಾರು ೧೯೫೨ರಿಂದಲೂ ಕಾಂಗ್ರೆಸ್ ಎಡಗೈ ಸಮುದಾಯಕ್ಕೆ ನೀಡಿದ ಪ್ರಾತಿಧ್ಯ ಬಲಗೈ ಸಮುದಾಯಕ್ಕೆ ನೀಡಿಲ್ಲ. ೪ ಲಕ್ಷಕ್ಕೂ ಹೆಚ್ಚು ಮತದಾರರು ಇರುವ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವುದಾಗಿ ಭರವಸೆ ನೀಡಿತ್ತು, ಆದರೆ ಇದು ಕೆ.ಎಚ್.ಮುನಿಯಪ್ಪ ಅವರನ್ನು ರಾಜಕೀಯದಿಂದ ಮುಗಿಸಲು ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರು ಆಡಿದ ನಾಟಕ ಎಂಬುದು ಸಮುದಾಯಕ್ಕೆ ಮನವರಿಕೆಯಾಗಿದ್ದು, ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಕೊತ್ತೂರು ಜಿ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಬಲಗೈ ಸಮುದಾಯಕ್ಕೆ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಹೈಕಮಾಂಡ್‌ಗೆ ಬೆದರಿಕೆ ಹಾಕಿದರು. ಆಂಧ್ರದಿಂದ ಬೆಂಗಳೂರಿಗೆ ವಲಸೆ ಬಂದಿರುವ ಗೌತಮ್ ಅವರಿಗೆ ಟಿಕೆಟ್ ನೀಡಿದ್ದು, ಈಗ್ಯಾಕೆ ರಾಜೀನಾಮೆ ನೀಡಲಿಲ್ಲ, ಇದೆಲ್ಲ ನಾಟಕವಷ್ಟೇನಾ ಎಂದು ಪ್ರಶ್ನಿಸಿದರು.

ಈ ಚುನಾವಣೆಯಲ್ಲಿ ಸಮುದಾಯದವರು ಎಚ್ಚೆತ್ತುಕೊಂಡಿದ್ದು ಸಮುದಾಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಇತರರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಮಲ್ಲೇಶ್ ಬಾಬು ಅವರಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ ಎಂದು ಹೇಳಿದರು.

ತಾಪಂ ಮಾಜಿ ಸದಸ್ಯ ಮುದುವಾಡಿ ಮಂಜುನಾಥ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಹೊರಗಿನವರಾಗಿದ್ದು, ಪ್ರತಿ ಬಾರಿಯೂ ಹೊರಗಿನವರಿಗೆ ಅವಕಾಶ ನೀಡಿದರೆ ಜಿಲ್ಲೆಯ ಅಭಿವೃದ್ಧಿ ಅಸಾಧ್ಯವಾಗುತ್ತದೆ. ಹೀಗಾಗಿ ಸ್ಥಳೀಯ ಅಭ್ಯರ್ಥಿ ಮಲ್ಲೇಶ್‌ಬಾಬು ಅವರನ್ನು ಬೆಂಬಲಿಸಲು ಬಲಗೈ ಸಮುದಾಯ ಒಗ್ಗಟ್ಟಾಗಿದ್ದು, ಎರಡು ಬಾರಿ ಸೋತಿರುವ ಹಿನ್ನೆಲೆಯಲ್ಲಿ ಸಿಂಪತಿಯೂ ಇದೆ. ಗೆಲುವು ಸಾಧಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಸುನಿಲ್ ಕುಮಾರ್, ಜಿಲ್ಲಾ ಬಿಜೆಪಿ ಎಸ್ಸಿ ಘಟಕದ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಜಯಚಂದ್ರ, ಯಲುವಗುಳಿ ನಾಗರಾಜ್, ಹೂಹಳ್ಳಿ ನಾರಾಯಣಸ್ವಾಮಿ ಇದ್ದರು.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

3 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

6 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

7 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

10 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

10 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

11 hours ago