Categories: ಕೋಲಾರ

ಈ ಬಾರಿ ಬಲಗೈ ಸಮುದಾಯವು ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಅವರನ್ನು ಬೆಂಬಲಿಸಬೇಕೆಂದು ಮನವಿ

ಕೋಲಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗಳ ಬಲಗೈ ಸಮುದಾಯವನ್ನು ಕಾಂಗ್ರೆಸ್ ಪಕ್ಷವು ರಾಜಕೀಯಕ್ಕೆ ಮಾತ್ರ ಬಳಸಿಕೊಂಡು ನಿರಂತರವಾಗಿ ವಂಚನೆ ಮಾಡಿಕೊಂಡು ಬಂದಿದ್ದು, ಈ ಬಾರಿ ಬಲಗೈ ಸಮುದಾಯವು ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಅವರನ್ನು ಬೆಂಬಲಿಸಬೇಕೆಂದು ಜೆಡಿಎಸ್ ಮುಖಂಡ ಹಾಗೂ ಮಾಜಿ ಜಿಪಂ ಸದಸ್ಯ ಬಾಲಾಜಿ ಚನ್ನಯ್ಯ ಮನವಿ ಮಾಡಿದರು

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ-ಜೆಡಿಎಸ್ ಪಕ್ಷಗಳು ಬಲಗೈ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಿದೆ. ಆದರೆ ಕಾಂಗ್ರೆಸ್ ಸಮಾಜದಲ್ಲಿ ಜಾತಿ ರಾಜಕಾರಣವನ್ನು ಹುಟ್ಟಿ ಹಾಕಿ ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ಒಡಕು ಉಂಟು ಮಾಡಿದೆ ಎಂದು ದೂರಿದರು.

ಜೆಡಿಎಸ್ ಪಕ್ಷವು ಮುಳಬಾಗಿಲು ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ್, ಬಿಜೆಪಿ ಕೆಜಿಎಫ್‌ನಿಂದ ವೈ.ಸಂಪಂಗಿ, ವೈ.ರಾಮಕ್ಕ, ಹಿಂದಿನ ಚುನಾವಣೆಯಲ್ಲಿ ದಳದಿಂದ ಬಾಲಾಜಿ ಚನ್ನಯ್ಯ, ಬಿಜೆಪಿಯಿಂದ ಡಿ.ಎಸ್.ವೀರಯ್ಯ ಹೀಗೆ ಅನೇಕ ಮಂದಿಗೆ ಟಿಕೆಟ್ ನೀಡಿತ್ತು ಎಂದು ಮಾಹಿತಿ ನೀಡಿದರು.

ಸುಮಾರು ೧೯೫೨ರಿಂದಲೂ ಕಾಂಗ್ರೆಸ್ ಎಡಗೈ ಸಮುದಾಯಕ್ಕೆ ನೀಡಿದ ಪ್ರಾತಿಧ್ಯ ಬಲಗೈ ಸಮುದಾಯಕ್ಕೆ ನೀಡಿಲ್ಲ. ೪ ಲಕ್ಷಕ್ಕೂ ಹೆಚ್ಚು ಮತದಾರರು ಇರುವ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವುದಾಗಿ ಭರವಸೆ ನೀಡಿತ್ತು, ಆದರೆ ಇದು ಕೆ.ಎಚ್.ಮುನಿಯಪ್ಪ ಅವರನ್ನು ರಾಜಕೀಯದಿಂದ ಮುಗಿಸಲು ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರು ಆಡಿದ ನಾಟಕ ಎಂಬುದು ಸಮುದಾಯಕ್ಕೆ ಮನವರಿಕೆಯಾಗಿದ್ದು, ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಕೊತ್ತೂರು ಜಿ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಬಲಗೈ ಸಮುದಾಯಕ್ಕೆ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಹೈಕಮಾಂಡ್‌ಗೆ ಬೆದರಿಕೆ ಹಾಕಿದರು. ಆಂಧ್ರದಿಂದ ಬೆಂಗಳೂರಿಗೆ ವಲಸೆ ಬಂದಿರುವ ಗೌತಮ್ ಅವರಿಗೆ ಟಿಕೆಟ್ ನೀಡಿದ್ದು, ಈಗ್ಯಾಕೆ ರಾಜೀನಾಮೆ ನೀಡಲಿಲ್ಲ, ಇದೆಲ್ಲ ನಾಟಕವಷ್ಟೇನಾ ಎಂದು ಪ್ರಶ್ನಿಸಿದರು.

ಈ ಚುನಾವಣೆಯಲ್ಲಿ ಸಮುದಾಯದವರು ಎಚ್ಚೆತ್ತುಕೊಂಡಿದ್ದು ಸಮುದಾಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಇತರರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಮಲ್ಲೇಶ್ ಬಾಬು ಅವರಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ ಎಂದು ಹೇಳಿದರು.

ತಾಪಂ ಮಾಜಿ ಸದಸ್ಯ ಮುದುವಾಡಿ ಮಂಜುನಾಥ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಹೊರಗಿನವರಾಗಿದ್ದು, ಪ್ರತಿ ಬಾರಿಯೂ ಹೊರಗಿನವರಿಗೆ ಅವಕಾಶ ನೀಡಿದರೆ ಜಿಲ್ಲೆಯ ಅಭಿವೃದ್ಧಿ ಅಸಾಧ್ಯವಾಗುತ್ತದೆ. ಹೀಗಾಗಿ ಸ್ಥಳೀಯ ಅಭ್ಯರ್ಥಿ ಮಲ್ಲೇಶ್‌ಬಾಬು ಅವರನ್ನು ಬೆಂಬಲಿಸಲು ಬಲಗೈ ಸಮುದಾಯ ಒಗ್ಗಟ್ಟಾಗಿದ್ದು, ಎರಡು ಬಾರಿ ಸೋತಿರುವ ಹಿನ್ನೆಲೆಯಲ್ಲಿ ಸಿಂಪತಿಯೂ ಇದೆ. ಗೆಲುವು ಸಾಧಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಸುನಿಲ್ ಕುಮಾರ್, ಜಿಲ್ಲಾ ಬಿಜೆಪಿ ಎಸ್ಸಿ ಘಟಕದ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಜಯಚಂದ್ರ, ಯಲುವಗುಳಿ ನಾಗರಾಜ್, ಹೂಹಳ್ಳಿ ನಾರಾಯಣಸ್ವಾಮಿ ಇದ್ದರು.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

46 minutes ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

15 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

15 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

16 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

17 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

20 hours ago