ಈ ವೃದ್ಧೆ ಸಾಮಾನ್ಯ ಅಜ್ಜಿಯಲ್ಲ: ವಯಸ್ಸು 73 ಆದರೂ… ಪ್ರೊಫೆಷನಲ್ ಡ್ರೈವರ್‌ಗಳಂತೆ ವಿವಿಧ ಬಗೆಯ ವಾಹನಗಳ ಡ್ರೈವ್ ಮಾಡುವ ಚಾಣಾಕ್ಷೆ: ಇಷ್ಟಕ್ಕೂ‌ ಯಾರು ಆ ಅಜ್ಜಿ..? ಇಲ್ಲಿದೆ ಮಾಹಿತಿ..

ಇತ್ತೀಚೆಗೆ ಕೇರಳದ ಅಜ್ಜಿಯೊಬ್ಬರು ಸ್ಪೋರ್ಟ್ಸ್ ಕಾರನ್ನು ಲೀಲಾಜಾಲವಾಗಿ ಓಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಣದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೋದಲ್ಲಿ ಸ್ಪೋರ್ಟ್ಸ್ ಕಾರು ಓಡಿಸುತ್ತಾ ಕಾಣಿಸಿಕೊಂಡಿರುವ ಅಜ್ಜಿಯ ಹೆಸರು ರಾಧಾಮಣಿ. ವಯಸ್ಸು 73 ಆದರೂ ಪ್ರೊಫೆಷನಲ್ ಡ್ರೈವರ್‌ಗಳಂತೆ ಕಾರುಗಳನ್ನು ಓಡಿಸುವ ಚಾಕಚಕ್ಯತೆಯನ್ನ ಹೊಂದಿದ್ದಾರೆ.

ರಾಧಾಮಣಿ ಅವರು ಡ್ರೈವರ್ ಸೀಟಿನಲ್ಲಿ ಕುಳಿತು ಕಾರನ್ನು ಓಡಿಸುತ್ತರೆ. ಪಾಶ್ಚಿಮಾತ್ಯ ದೇಶಗಳಲ್ಲಿ ಇದು ಸಾಮಾನ್ಯ ದೃಶ್ಯವಾಗಿದ್ದರೂ, ರಾಧಾಮಣಿ ಅವರ ವಯಸ್ಸು ಸುಮಾರು 73 ವರ್ಷ ಮತ್ತು ಭಾರತದಲ್ಲಿ ಇಷ್ಟು ವಯಸ್ಸಿನ ಜನರು, ವಿಶೇಷವಾಗಿ ಮಹಿಳೆಯರು ಕಾರುಗಳನ್ನು ಓಡಿಸುವುದನ್ನು ನಾವು ತೀರಾ ವಿರಳವಾಗಿ ನೋಡುತ್ತೇವೆ. ಸದ್ಯ ಯಾವುದೇ ಸಮಸ್ಯೆಗಳಿಲ್ಲದೆ ಆತ್ಮವಿಶ್ವಾಸದಿಂದ Z4 ಕಾರನ್ನು ಈ ವೃದ್ದೆ ಚಾಲನೆ ಮಾಡಿ ವೈರಲ್ ಆಗಿದ್ದಾರೆ.

ರಾಧಾಮಣಿ ಕೇರಳದ ಕೊಚ್ಚಿಯಲ್ಲಿರುವ A2Z ಡ್ರೈವಿಂಗ್ ಸ್ಕೂಲ್‌ನ ಮಾಲೀಕರಾಗಿದ್ದಾರೆ. ಡ್ರೈವಿಂಗ್ ಸ್ಕೂಲ್ ನ್ನು 1970 ರಲ್ಲಿ ಅವರ ಪತಿ ಸ್ಥಾಪಿಸಿದ್ದರು. ರಾಧಾಮಣಿ ಅವರು 30 ವರ್ಷದವರಾಗಿದ್ದಾಗ ಮೊದಲು ಕಾರು ಓಡಿಸುವುದನ್ನು ಕಲಿತರು. ಆಕೆಯ ಪತಿಯೇ ಡ್ರೈವಿಂಗ್ ಕಲಿಯಲು ಒತ್ತಾಯಿಸಿದ್ದರಂತೆ. ಪ್ರಸ್ತುತ 11 ವಿವಿಧ ವರ್ಗಗಳ ವಾಹನಗಳನ್ನು ಓಡಿಸಲು ಪರವಾನಗಿಗಳನ್ನು ಹೊಂದಿದ್ದಾರೆ.

ವಿವಿಧ ಬಗೆಯ ಕಾರುಗಳು, ಅಗೆಯುವ ಯಂತ್ರ, ಫೋರ್ಕ್‌ಲಿಫ್ಟ್, ಕ್ರೇನ್, ರೋಡ್ ರೋಲರ್, ಟ್ರಾಕ್ಟರ್, ಕಂಟೈನರ್ ಟ್ರೈಲರ್ ಟ್ರಕ್, ಬಸ್, ಲಾರಿ ಮತ್ತು ಇತ್ತೀಚಿನ ವಾಹನಗಳನ್ನು ಓಡಿಸಲು ಅಜ್ಜಿ ಪರವಾನಗಿಯನ್ನು ಹೊಂದಿದ್ದಾರೆ. ಕೇರಳದಲ್ಲಿ ಭಾರೀ ವಾಹನ ಪರವಾನಗಿ ಪಡೆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ರಾಧಾಮಣಿ ಪಾತ್ರರಾಗಿದ್ದಾರೆ. 2021 ರಲ್ಲಿ ಅವರು ಅಪಾಯಕಾರಿ ಸರಕುಗಳನ್ನು ಸಾಗಿಸಲು ಕೂಡ ಪರವಾನಗಿ ಪಡೆದಿದ್ದಾರೆ.

ಅವರು 1988 ರಲ್ಲಿ ಬಸ್ ಮತ್ತು ಲಾರಿ ಎರಡಕ್ಕೂ ಮೊದಲ ಪರವಾನಗಿ ಪಡೆದರು. ಈ ಪರವಾನಗಿಗಳನ್ನು ಪಡೆಯಲು ಕಾರಣ ಅವರು 2004 ರಲ್ಲಿ ಅಪಘಾತದಲ್ಲಿ ತನ್ನ ಪತಿಯನ್ನು ಕಳೆದುಕೊಂಡ ನಂತರ ಡ್ರೈವಿಂಗ್ ಸ್ಕೂಲ್ ವ್ಯವಹಾರವನ್ನು ಸ್ವತಃ ನಡೆಸಬೇಕಾಗಿತ್ತು. ಡ್ರೈವಿಂಗ್ ಸ್ಕೂಲ್ ನಡೆಸಲು, ಮಾಲೀಕರು ಅಥವಾ ಬೋಧಕರು ಅವರು ಕಲಿಸುವ ವಾಹನಗಳಿಗೆ ಪರವಾನಗಿ ಹೊಂದಿರುವುದು ಕಡ್ಡಾಯವಾಗಿದೆ.

ಒಂದು ಕುತೂಹಲಕಾರಿ ಸಂಗತಿಯೆಂದರೆ, ರಾಧಾಮಣಿ ಅವರು ಈ ಎಲ್ಲಾ ಭಾರೀ ವಾಹನಗಳು ಮತ್ತು ಕಾರುಗಳನ್ನು ಓಡಿಸಲು ಪರವಾನಗಿ ಹೊಂದಿದ್ದರೂ, ಆಕೆಯ ಅತ್ಯಂತ ನೆಚ್ಚಿನ ವಾಹನವೆಂದರೆ ದ್ವಿಚಕ್ರ ವಾಹನ. ಅವರು 1993 ರಲ್ಲಿ ತಮ್ಮ ದ್ವಿಚಕ್ರ ವಾಹನ ಪರವಾನಗಿಯನ್ನು ಪಡೆದರು. ಅವರ ಪತಿ ತನಗಾಗಿ ಸ್ಕೂಟರ್ ಕೊಡಿಸಿದ್ದರು. ಅಂದಿನಿಂದ ತನ್ನ ಸ್ಕೂಟರ್‌ನಲ್ಲೇ ಓಡಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

3 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

12 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

20 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago