Categories: IPL 2025

‘ಈ ಸಲ ಕಪ್ ನಮ್ದು’: 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಆರ್ ಸಿಬಿ: ಅಭಿಮಾನಿಗಳಿಗೆ ಖುಷಿಯೋ ಖುಷಿ

ಹಾಲಿ ಐಪಿಎಲ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ…..

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಹದಿನೆಂಟು ವರ್ಷಗಳ ಕಾಯುವಿಕೆ ಈ ಬಾರಿ ಅಂತ್ಯವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಟಾ ಐಪಿಎಲ್ ನ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಅಹಮದಾಬಾದ್ ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ ಗಳಿಂದ ಗೆಲುವು ಸಾಧಿಸುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸು ನನಸಾಗಿದೆ.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿದರು.
ಬ್ಯಾಟಿಂಗ್ ಆಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ (43) ಹಾಗೂ ಪಿಲ್ ಸಾಲ್ಟ್ (16) ಉತ್ತಮ ಅಡಿಪಾಯ ಹಾಕಿದರು.

ನಂತರ ಬಂದ ಕನ್ನಡಿಗ ಮಾಯಾಂಕ್ ಅಗರ್ವಾಲ್ (24), ನಾಯಕ ರಜತ್ ಪಾಟಿದರ್ (26), ಲಿವಿಂಗ್ ಸ್ಟನ್ (25) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜಿತೇಶ್ ಶರ್ಮಾ (24) ರನ್ ಗಳಿಸಿ ತಂಡದ ಮೊತ್ತವನ್ನು 190 ರನ್ ಪೇರಿಸಿದರು.

ಗುರಿ ಬೆನ್ನತ್ತಿದ್ದ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರರಾದ ಪ್ರಿಯಾಂಶ ಆರ್ಯ (24) ಹಾಗೂ ಪ್ರಭು ಸಿಮ್ರಾನ್ ಸಿಂಗ್ (26) ಉತ್ತಮ ಆರಂಭ ಪಡೆದರೂ ಜೋಶ್ ಹೆಜಲ್ವುಡ್ ಆರಂಭಿಕ ಜೊತೆಯಾಟವನ್ನು ಬೇರ್ಪಡಿಸಿದರು.

ನಂತರ ಬಂದ ಜೋಶ್ ಇಂಗ್ಲಿಷ್ (39) ಹಾಗೂ ಶಶಾಂಕ್ ಸಿಂಗ್ (61) ಗಳಿಸಿದರು. ಉಳಿದ ಬ್ಯಾಟರ್ ಗಳು ಉತ್ತಮ ರನ್ ಪೇರಿಸುವಲ್ಲಿ ವಿಫಲರಾದರು.

ರಾಯಲ್ ಚಾಲೆಂಜರ್ಸ್ ಪರವಾಗಿ ಕ್ರುನಲ್ ಪಾಂಡ್ಯ ಹಾಗೂ ಭುವನೇಶ್ವರ್ ಕುಮಾರ್ ತಲಾ 2 ವಿಕೆಟ್ ಪಡೆದರು. ಉಳಿದಂತೆ ಜೋಶ್ ಹೆಜಲ್ವುಡ್, ಯಶ್ ದಯಾಳ್ ಹಾಗೂ ಶೆಪರ್ಡ್ ತಲಾ ಒಂದು ವಿಕೆಟ್ ಪಡೆದು ಪಂಜಾಬ್ ಕಿಂಗ್ಸ್ ಗೆ ಕಡಿವಾಣ ಹಾಕುವ ಮೂಲಕ ಚಾಂಪಿಯನ್ ಶಿಪ್ ಪಟ್ಟ ಅಲಂಕರಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿರುವುದರಿಂದ ಅಭಿಮಾನಿಗಳಿಗೆ ಖುಷಿಯೋ ಖುಷಿ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಗುತ್ತಿದೆ…..

Ramesh Babu

Journalist

Share
Published by
Ramesh Babu

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

8 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

14 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

17 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

17 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

20 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

22 hours ago