ದೇಶದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶುಕ್ರವಾರ ‘ಏಕತಾ ನಡಿಗೆ’ ಓಟ ನಡೆಯಿತು.
ತಾಲೂಕಿನ ಗೀತಂ ಯೂನಿವರ್ಸಿಟಿಯಲ್ಲಿ ಏಕತಾ ನಡಿಗೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಪ್ರಮಾಣ ವಚನ ಬೋಧಿಸಿ, ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಬಳಿಕ ಪೊಲೀಸರು, ಎನ್.ಸಿ.ಸಿ ಕೆಡೆಟ್ ಗಳು, ವಿದ್ಯಾರ್ಥಿಗಳು, ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು, ಸಾರ್ವಜನಿಕರು ಏಕತಾ ನಡಿಗೆಯಲ್ಲಿ ಹೆಜ್ಜೆ ಹಾಕಿದರು.
ಗೀತಂ ಯೂನಿವರ್ಸಿಟಿಯಿಂದ ಆರಂಭವಾದ ನಡಿಗೆಯು ನಾಗದೇನಹಳ್ಳಿ ತಲುಪಿ ನಡಿಗೆ ಸಂಪನ್ನಗೊಂಡಿತು.
ಈ ವೇಳೆ ಎಎಸ್ಪಿ ನಾಗರಾಜು, ಡಿವೈಎಸ್ಪಿ ರವಿ.ಪಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ಪೊಲೀಸ್ ಚಂದ್ರಶೇಖರ್, ಗೀತಂ ಯೂನಿವರ್ಸಿಟಿ ಆಡಳಿತ ಮಂಡಳಿ, ಸಿಬ್ಬಂದಿ, ಉಪನ್ಯಾಸಕರು ವಿವಿಧ ಠಾಣೆಗಳ ಪೊಲೀಸರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…