ಉಗ್ರರ ದಾಳಿಗೆ ಬಲಿಯಾದ ಕನ್ನಡಿಗರ ಮೃತದೇಹ ಬೆಂಗಳೂರಿಗೆ ರವಾನೆ

ಇಂದು ಮುಂಜಾನೆ ಸುಮಾರು 3:30ಕ್ಕೆ ಕಾಶ್ಮೀರ ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹವನ್ನು ಬೆಂಗಳೂರು ವಿಮಾನ‌ನಿಲ್ದಾಣಕ್ಕೆ ತರಲಾಯಿತು.

ಮೃತರ ಕುಟುಂಬಸ್ಥರ ಜೊತೆ ಕೇಂದ್ರ ಸಚವ ವಿ.ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಿದ್ದು, ಧೈರ್ಯ ತುಂಬಿದರು.

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟಿರುವ ಇಬ್ಬರು ಕನ್ನಡಿಗರ ಮೃತದೇಹವನ್ನು ಕಾಶ್ಮೀರದಿಂದ ದಿಲ್ಲಿ, ಮುಂಬಾಯಿ ಮಾರ್ಗವಾಗಿ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ. ಇಲ್ಲಿಂದ ಆಂಬುಲೆನ್ಸ್ ಮೂಲಕ ಮಂಜುನಾಥ್‌ರವರ ಪಾರ್ಥೀವ ಶರೀರವನ್ನು ಶಿವಮೊಗ್ಗ, ಭರತ್ ಭೂಷಣ್ ಮೃತದೇಹವನ್ನು ಬೆಂಗಳೂರಿನ ಮತ್ತಿಕೆರೆ ಹಾಗೂ ಮಧುಸೂದನ್ ರವರ ಪಾರ್ಥೀವ ಶರೀರವನ್ನು ಚೆನ್ನೈ ಮೂಲಕ ನೆಲ್ಲೋರಿಗೆ ಕಳುಹಿಸಿ ಕೊಡಲು ವ್ಯವಸ್ಥೆ ಮಾಡಲಾಗಿದೆ.

 

ಶಿವಮೊಗ್ಗಕ್ಕೆ ಮಂಜುನಾಥ್ ಮೃತದೇಹ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುಂಜಾನೆ ಬಂದ ಮಂಜುನಾಥ್ ಮೃತದೇಹವನ್ನು ಅವರ ಕುಟುಂಬಸ್ಥರ ಜೊತೆ ರಸ್ತೆ ಮಾರ್ಗವಾಗಿ ಶಿವಮೊಗ್ಗಕ್ಕೆ ಕಳಿಸಿಕೊಡಲಾಯಿತು. ಬೆಳಗ್ಗೆ 9 ಗಂಟೆಯ ಸುಮಾರಿಗೆ ತಲುಪುವ ನಿರೀಕ್ಷೆಯಿದೆ.. ಮಧ್ಯಾಹ್ನ 12.30ರವರೆಗೆ ಮನೆ ಬಳಿ ಅಂತಿಮ ವಿಧಿವಿಧಾನ ಮತ್ತು ಸಾರ್ವಜನಿಕ ದರ್ಶನ ಇರಲಿದೆ. ಆ ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ. ಸಾಗರ ರಸ್ತೆ, ಐಬಿ ಸರ್ಕಲ್‌, ಕುವೆಂಪು ರಸ್ತೆ, ಜೈಲ್‌ ವೃತ್ತ, ನೆಹರು ರಸ್ತೆ, ಬಿ.ಎಚ್‌.ರಸ್ತೆ, ಶಂಕರಮಠ ಸರ್ಕಲ್‌ನಿಂದ ರೋಟರಿ ಚಿತಾಗಾರಕ್ಕೆ ತಲುಪಲಿದೆ. ಮಂಜನಾಥ್‌ ರಾವ್‌ ಅವರ ಅಂತ್ಯಸಂಸ್ಕಾರ ಮತ್ತು ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್‌ ಮಾಡಲಾಗುತ್ತದೆ.

ಅದೇರೀತಿ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 40ಕ್ಕೂ ಅಧಿಕ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

7 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

7 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

9 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

18 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

20 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago