ಉಗ್ರರ ದಾಳಿಗೆ ಬಲಿಯಾದ ಕನ್ನಡಿಗರ ಮೃತದೇಹ ಬೆಂಗಳೂರಿಗೆ ರವಾನೆ

ಇಂದು ಮುಂಜಾನೆ ಸುಮಾರು 3:30ಕ್ಕೆ ಕಾಶ್ಮೀರ ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹವನ್ನು ಬೆಂಗಳೂರು ವಿಮಾನ‌ನಿಲ್ದಾಣಕ್ಕೆ ತರಲಾಯಿತು.

ಮೃತರ ಕುಟುಂಬಸ್ಥರ ಜೊತೆ ಕೇಂದ್ರ ಸಚವ ವಿ.ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಿದ್ದು, ಧೈರ್ಯ ತುಂಬಿದರು.

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟಿರುವ ಇಬ್ಬರು ಕನ್ನಡಿಗರ ಮೃತದೇಹವನ್ನು ಕಾಶ್ಮೀರದಿಂದ ದಿಲ್ಲಿ, ಮುಂಬಾಯಿ ಮಾರ್ಗವಾಗಿ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ. ಇಲ್ಲಿಂದ ಆಂಬುಲೆನ್ಸ್ ಮೂಲಕ ಮಂಜುನಾಥ್‌ರವರ ಪಾರ್ಥೀವ ಶರೀರವನ್ನು ಶಿವಮೊಗ್ಗ, ಭರತ್ ಭೂಷಣ್ ಮೃತದೇಹವನ್ನು ಬೆಂಗಳೂರಿನ ಮತ್ತಿಕೆರೆ ಹಾಗೂ ಮಧುಸೂದನ್ ರವರ ಪಾರ್ಥೀವ ಶರೀರವನ್ನು ಚೆನ್ನೈ ಮೂಲಕ ನೆಲ್ಲೋರಿಗೆ ಕಳುಹಿಸಿ ಕೊಡಲು ವ್ಯವಸ್ಥೆ ಮಾಡಲಾಗಿದೆ.

 

ಶಿವಮೊಗ್ಗಕ್ಕೆ ಮಂಜುನಾಥ್ ಮೃತದೇಹ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುಂಜಾನೆ ಬಂದ ಮಂಜುನಾಥ್ ಮೃತದೇಹವನ್ನು ಅವರ ಕುಟುಂಬಸ್ಥರ ಜೊತೆ ರಸ್ತೆ ಮಾರ್ಗವಾಗಿ ಶಿವಮೊಗ್ಗಕ್ಕೆ ಕಳಿಸಿಕೊಡಲಾಯಿತು. ಬೆಳಗ್ಗೆ 9 ಗಂಟೆಯ ಸುಮಾರಿಗೆ ತಲುಪುವ ನಿರೀಕ್ಷೆಯಿದೆ.. ಮಧ್ಯಾಹ್ನ 12.30ರವರೆಗೆ ಮನೆ ಬಳಿ ಅಂತಿಮ ವಿಧಿವಿಧಾನ ಮತ್ತು ಸಾರ್ವಜನಿಕ ದರ್ಶನ ಇರಲಿದೆ. ಆ ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ. ಸಾಗರ ರಸ್ತೆ, ಐಬಿ ಸರ್ಕಲ್‌, ಕುವೆಂಪು ರಸ್ತೆ, ಜೈಲ್‌ ವೃತ್ತ, ನೆಹರು ರಸ್ತೆ, ಬಿ.ಎಚ್‌.ರಸ್ತೆ, ಶಂಕರಮಠ ಸರ್ಕಲ್‌ನಿಂದ ರೋಟರಿ ಚಿತಾಗಾರಕ್ಕೆ ತಲುಪಲಿದೆ. ಮಂಜನಾಥ್‌ ರಾವ್‌ ಅವರ ಅಂತ್ಯಸಂಸ್ಕಾರ ಮತ್ತು ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್‌ ಮಾಡಲಾಗುತ್ತದೆ.

ಅದೇರೀತಿ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 40ಕ್ಕೂ ಅಧಿಕ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

49 minutes ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

3 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

10 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago