ಉಗ್ರರ ದಾಳಿಗೆ ಬಲಿಯಾದ ಕನ್ನಡಿಗರ ಮೃತದೇಹ ಬೆಂಗಳೂರಿಗೆ ರವಾನೆ

ಇಂದು ಮುಂಜಾನೆ ಸುಮಾರು 3:30ಕ್ಕೆ ಕಾಶ್ಮೀರ ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹವನ್ನು ಬೆಂಗಳೂರು ವಿಮಾನ‌ನಿಲ್ದಾಣಕ್ಕೆ ತರಲಾಯಿತು.

ಮೃತರ ಕುಟುಂಬಸ್ಥರ ಜೊತೆ ಕೇಂದ್ರ ಸಚವ ವಿ.ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಿದ್ದು, ಧೈರ್ಯ ತುಂಬಿದರು.

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟಿರುವ ಇಬ್ಬರು ಕನ್ನಡಿಗರ ಮೃತದೇಹವನ್ನು ಕಾಶ್ಮೀರದಿಂದ ದಿಲ್ಲಿ, ಮುಂಬಾಯಿ ಮಾರ್ಗವಾಗಿ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ. ಇಲ್ಲಿಂದ ಆಂಬುಲೆನ್ಸ್ ಮೂಲಕ ಮಂಜುನಾಥ್‌ರವರ ಪಾರ್ಥೀವ ಶರೀರವನ್ನು ಶಿವಮೊಗ್ಗ, ಭರತ್ ಭೂಷಣ್ ಮೃತದೇಹವನ್ನು ಬೆಂಗಳೂರಿನ ಮತ್ತಿಕೆರೆ ಹಾಗೂ ಮಧುಸೂದನ್ ರವರ ಪಾರ್ಥೀವ ಶರೀರವನ್ನು ಚೆನ್ನೈ ಮೂಲಕ ನೆಲ್ಲೋರಿಗೆ ಕಳುಹಿಸಿ ಕೊಡಲು ವ್ಯವಸ್ಥೆ ಮಾಡಲಾಗಿದೆ.

 

ಶಿವಮೊಗ್ಗಕ್ಕೆ ಮಂಜುನಾಥ್ ಮೃತದೇಹ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುಂಜಾನೆ ಬಂದ ಮಂಜುನಾಥ್ ಮೃತದೇಹವನ್ನು ಅವರ ಕುಟುಂಬಸ್ಥರ ಜೊತೆ ರಸ್ತೆ ಮಾರ್ಗವಾಗಿ ಶಿವಮೊಗ್ಗಕ್ಕೆ ಕಳಿಸಿಕೊಡಲಾಯಿತು. ಬೆಳಗ್ಗೆ 9 ಗಂಟೆಯ ಸುಮಾರಿಗೆ ತಲುಪುವ ನಿರೀಕ್ಷೆಯಿದೆ.. ಮಧ್ಯಾಹ್ನ 12.30ರವರೆಗೆ ಮನೆ ಬಳಿ ಅಂತಿಮ ವಿಧಿವಿಧಾನ ಮತ್ತು ಸಾರ್ವಜನಿಕ ದರ್ಶನ ಇರಲಿದೆ. ಆ ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ. ಸಾಗರ ರಸ್ತೆ, ಐಬಿ ಸರ್ಕಲ್‌, ಕುವೆಂಪು ರಸ್ತೆ, ಜೈಲ್‌ ವೃತ್ತ, ನೆಹರು ರಸ್ತೆ, ಬಿ.ಎಚ್‌.ರಸ್ತೆ, ಶಂಕರಮಠ ಸರ್ಕಲ್‌ನಿಂದ ರೋಟರಿ ಚಿತಾಗಾರಕ್ಕೆ ತಲುಪಲಿದೆ. ಮಂಜನಾಥ್‌ ರಾವ್‌ ಅವರ ಅಂತ್ಯಸಂಸ್ಕಾರ ಮತ್ತು ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್‌ ಮಾಡಲಾಗುತ್ತದೆ.

ಅದೇರೀತಿ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 40ಕ್ಕೂ ಅಧಿಕ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago