ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು ದೊಡ್ಡಬಳ್ಳಾಪುರ ನಗರದ ದರ್ಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಆಯೋಜನೆ ಮಾಡಲಾಗಿತ್ತು.

ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾ ಉಪಾಧ್ಯಕ್ಷ ಎಂ ಮಲ್ಲೇಶ್, ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು, ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಮತ್ತು ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅತ್ಯಗತ್ಯ. ಬಡವರು ಒಳ್ಳೆಯ ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಲು ಅಸಾಧ್ಯ. ಅದ್ದರಿಂದ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಬಡ ಕೂಲಿ ಕಾರ್ಮಿಕ ವರ್ಗದವರಿಗೆ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಇದು ಕೊಲೆಸ್ಟ್ರಾಲ್, ರಕ್ತದ ಸಕ್ಕರೆ, ಬಿಪಿ, ಮತ್ತು ಕ್ಯಾನ್ಸರ್‌ ನಂತಹ ರೋಗಗಳ ಮುನ್ನೆಚ್ಚರಿಕೆ ವಹಿಸಲು, ಹಾಗೆಯೇ ಸರಿಯಾದ ಜೀವನಶೈಲಿ ಅಳವಡಿಸಿಕೊಳ್ಳಲು ವೈದ್ಯರ ಮಾರ್ಗದರ್ಶನ ಪಡೆಯಲು ಸಹಾಯ ಮಾಡುತ್ತದೆ.

ದೊಡ್ಡಬಳ್ಳಾಪುರ ನಗರದ ಹೃದಯ ಭಾಗವಾದ ಖಾಸಬಾಗ್ ದರ್ಗಾಪುರ, ರಂಗಪ್ಪ ಸರ್ಕಲ್ ಈ ಭಾಗದಲ್ಲಿ ಹೆಚ್ಚು ಬಡ ಕುಟಂಬಗಳು ಇದ್ದು, ದಿನ ನಿತ್ಯದ ದುಡಿಮೆ ಊಟ ಬಟ್ಟೆಗೆ ಸಾಲುವುದಿಲ್ಲ ಅದರೆ ಅರೋಗ್ಯ ತಪಾಸಣೆ ಇನ್ನೂ ಯಾವರೀತಿ ಮಾಡುತ್ತಾರೆ ಅದರಿಂದ ನವಚೇತನ ಆಸ್ಪತ್ರೆ  ಉಷ್ಟ್ರತಿ ಎನ್‌ ಜಿ ಓ, ಡಿ ಎಸ್‌ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದರು.

ಆರೋಗ್ಯವೇ ಭಾಗ್ಯ. ಉತ್ತಮ ಆರೋಗ್ಯವು ದೈಹಿಕ, ಮಾನಸಿಕವಾಗಿ ಸದೃಢವಾಗಿರುವ ಸ್ಥಿತಿಯಾಗಿದ್ದು, ಸಂತೋಷದ ಮತ್ತು ಯಶಸ್ವಿ ಜೀವನಕ್ಕೆ ಅಡಿಪಾಯವಾಗಿದೆ. ಇದು ಕಾಯಿಲೆಗಳನ್ನು ತಡೆಗಟ್ಟಲು, ಜೀವನದ ಗುಣಮಟ್ಟವನ್ನು ಹೆಚ್ಚಿಸಲು, ದೈನಂದಿನ ಕಾರ್ಯಕ್ಷಮತೆ ಹೆಚ್ಚಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ನಿರ್ಣಾಯಕವಾಗಿದೆ. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ದೇಹದ ದೃಢವಾಗಿರುತ್ತೆ ಎಂದರು.

ಈ ಸಂದರ್ಭದಲ್ಲಿ ನವಚೇತನ ಆಸ್ಪತ್ರೆಯ ಎಂಡಿ ಡಾ.ರಾಜೇಶ್, ನೇತ್ರ ತಜ್ಞ ಡಾ.ವೈ.ಗಿರೀಶ್, ನಿರ್ದೇಶಕರಾದ ಪ್ರಕಾಶ್, ಮಾರ್ಕೆಟಿಂಗ್ ವಿಭಾಗದ ಮೊಹಮ್ಮದ್ ರಫೀ, ಆನಂದ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

3 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

4 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

5 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

6 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

15 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

24 hours ago