ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು ದೊಡ್ಡಬಳ್ಳಾಪುರ ನಗರದ ದರ್ಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಆಯೋಜನೆ ಮಾಡಲಾಗಿತ್ತು.

ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾ ಉಪಾಧ್ಯಕ್ಷ ಎಂ ಮಲ್ಲೇಶ್, ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು, ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಮತ್ತು ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅತ್ಯಗತ್ಯ. ಬಡವರು ಒಳ್ಳೆಯ ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಲು ಅಸಾಧ್ಯ. ಅದ್ದರಿಂದ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಬಡ ಕೂಲಿ ಕಾರ್ಮಿಕ ವರ್ಗದವರಿಗೆ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಇದು ಕೊಲೆಸ್ಟ್ರಾಲ್, ರಕ್ತದ ಸಕ್ಕರೆ, ಬಿಪಿ, ಮತ್ತು ಕ್ಯಾನ್ಸರ್‌ ನಂತಹ ರೋಗಗಳ ಮುನ್ನೆಚ್ಚರಿಕೆ ವಹಿಸಲು, ಹಾಗೆಯೇ ಸರಿಯಾದ ಜೀವನಶೈಲಿ ಅಳವಡಿಸಿಕೊಳ್ಳಲು ವೈದ್ಯರ ಮಾರ್ಗದರ್ಶನ ಪಡೆಯಲು ಸಹಾಯ ಮಾಡುತ್ತದೆ.

ದೊಡ್ಡಬಳ್ಳಾಪುರ ನಗರದ ಹೃದಯ ಭಾಗವಾದ ಖಾಸಬಾಗ್ ದರ್ಗಾಪುರ, ರಂಗಪ್ಪ ಸರ್ಕಲ್ ಈ ಭಾಗದಲ್ಲಿ ಹೆಚ್ಚು ಬಡ ಕುಟಂಬಗಳು ಇದ್ದು, ದಿನ ನಿತ್ಯದ ದುಡಿಮೆ ಊಟ ಬಟ್ಟೆಗೆ ಸಾಲುವುದಿಲ್ಲ ಅದರೆ ಅರೋಗ್ಯ ತಪಾಸಣೆ ಇನ್ನೂ ಯಾವರೀತಿ ಮಾಡುತ್ತಾರೆ ಅದರಿಂದ ನವಚೇತನ ಆಸ್ಪತ್ರೆ  ಉಷ್ಟ್ರತಿ ಎನ್‌ ಜಿ ಓ, ಡಿ ಎಸ್‌ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದರು.

ಆರೋಗ್ಯವೇ ಭಾಗ್ಯ. ಉತ್ತಮ ಆರೋಗ್ಯವು ದೈಹಿಕ, ಮಾನಸಿಕವಾಗಿ ಸದೃಢವಾಗಿರುವ ಸ್ಥಿತಿಯಾಗಿದ್ದು, ಸಂತೋಷದ ಮತ್ತು ಯಶಸ್ವಿ ಜೀವನಕ್ಕೆ ಅಡಿಪಾಯವಾಗಿದೆ. ಇದು ಕಾಯಿಲೆಗಳನ್ನು ತಡೆಗಟ್ಟಲು, ಜೀವನದ ಗುಣಮಟ್ಟವನ್ನು ಹೆಚ್ಚಿಸಲು, ದೈನಂದಿನ ಕಾರ್ಯಕ್ಷಮತೆ ಹೆಚ್ಚಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ನಿರ್ಣಾಯಕವಾಗಿದೆ. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ದೇಹದ ದೃಢವಾಗಿರುತ್ತೆ ಎಂದರು.

ಈ ಸಂದರ್ಭದಲ್ಲಿ ನವಚೇತನ ಆಸ್ಪತ್ರೆಯ ಎಂಡಿ ಡಾ.ರಾಜೇಶ್, ನೇತ್ರ ತಜ್ಞ ಡಾ.ವೈ.ಗಿರೀಶ್, ನಿರ್ದೇಶಕರಾದ ಪ್ರಕಾಶ್, ಮಾರ್ಕೆಟಿಂಗ್ ವಿಭಾಗದ ಮೊಹಮ್ಮದ್ ರಫೀ, ಆನಂದ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

2 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

13 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

13 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

18 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago