ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು ದೊಡ್ಡಬಳ್ಳಾಪುರ ನಗರದ ದರ್ಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಆಯೋಜನೆ ಮಾಡಲಾಗಿತ್ತು.

ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾ ಉಪಾಧ್ಯಕ್ಷ ಎಂ ಮಲ್ಲೇಶ್, ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು, ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಮತ್ತು ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅತ್ಯಗತ್ಯ. ಬಡವರು ಒಳ್ಳೆಯ ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಲು ಅಸಾಧ್ಯ. ಅದ್ದರಿಂದ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಬಡ ಕೂಲಿ ಕಾರ್ಮಿಕ ವರ್ಗದವರಿಗೆ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಇದು ಕೊಲೆಸ್ಟ್ರಾಲ್, ರಕ್ತದ ಸಕ್ಕರೆ, ಬಿಪಿ, ಮತ್ತು ಕ್ಯಾನ್ಸರ್‌ ನಂತಹ ರೋಗಗಳ ಮುನ್ನೆಚ್ಚರಿಕೆ ವಹಿಸಲು, ಹಾಗೆಯೇ ಸರಿಯಾದ ಜೀವನಶೈಲಿ ಅಳವಡಿಸಿಕೊಳ್ಳಲು ವೈದ್ಯರ ಮಾರ್ಗದರ್ಶನ ಪಡೆಯಲು ಸಹಾಯ ಮಾಡುತ್ತದೆ.

ದೊಡ್ಡಬಳ್ಳಾಪುರ ನಗರದ ಹೃದಯ ಭಾಗವಾದ ಖಾಸಬಾಗ್ ದರ್ಗಾಪುರ, ರಂಗಪ್ಪ ಸರ್ಕಲ್ ಈ ಭಾಗದಲ್ಲಿ ಹೆಚ್ಚು ಬಡ ಕುಟಂಬಗಳು ಇದ್ದು, ದಿನ ನಿತ್ಯದ ದುಡಿಮೆ ಊಟ ಬಟ್ಟೆಗೆ ಸಾಲುವುದಿಲ್ಲ ಅದರೆ ಅರೋಗ್ಯ ತಪಾಸಣೆ ಇನ್ನೂ ಯಾವರೀತಿ ಮಾಡುತ್ತಾರೆ ಅದರಿಂದ ನವಚೇತನ ಆಸ್ಪತ್ರೆ  ಉಷ್ಟ್ರತಿ ಎನ್‌ ಜಿ ಓ, ಡಿ ಎಸ್‌ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದರು.

ಆರೋಗ್ಯವೇ ಭಾಗ್ಯ. ಉತ್ತಮ ಆರೋಗ್ಯವು ದೈಹಿಕ, ಮಾನಸಿಕವಾಗಿ ಸದೃಢವಾಗಿರುವ ಸ್ಥಿತಿಯಾಗಿದ್ದು, ಸಂತೋಷದ ಮತ್ತು ಯಶಸ್ವಿ ಜೀವನಕ್ಕೆ ಅಡಿಪಾಯವಾಗಿದೆ. ಇದು ಕಾಯಿಲೆಗಳನ್ನು ತಡೆಗಟ್ಟಲು, ಜೀವನದ ಗುಣಮಟ್ಟವನ್ನು ಹೆಚ್ಚಿಸಲು, ದೈನಂದಿನ ಕಾರ್ಯಕ್ಷಮತೆ ಹೆಚ್ಚಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ನಿರ್ಣಾಯಕವಾಗಿದೆ. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ದೇಹದ ದೃಢವಾಗಿರುತ್ತೆ ಎಂದರು.

ಈ ಸಂದರ್ಭದಲ್ಲಿ ನವಚೇತನ ಆಸ್ಪತ್ರೆಯ ಎಂಡಿ ಡಾ.ರಾಜೇಶ್, ನೇತ್ರ ತಜ್ಞ ಡಾ.ವೈ.ಗಿರೀಶ್, ನಿರ್ದೇಶಕರಾದ ಪ್ರಕಾಶ್, ಮಾರ್ಕೆಟಿಂಗ್ ವಿಭಾಗದ ಮೊಹಮ್ಮದ್ ರಫೀ, ಆನಂದ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

3 hours ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

6 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

9 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

21 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

1 day ago