ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು ದೊಡ್ಡಬಳ್ಳಾಪುರ ನಗರದ ದರ್ಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಆಯೋಜನೆ ಮಾಡಲಾಗಿತ್ತು.

ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾ ಉಪಾಧ್ಯಕ್ಷ ಎಂ ಮಲ್ಲೇಶ್, ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು, ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಮತ್ತು ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅತ್ಯಗತ್ಯ. ಬಡವರು ಒಳ್ಳೆಯ ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಲು ಅಸಾಧ್ಯ. ಅದ್ದರಿಂದ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಬಡ ಕೂಲಿ ಕಾರ್ಮಿಕ ವರ್ಗದವರಿಗೆ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಇದು ಕೊಲೆಸ್ಟ್ರಾಲ್, ರಕ್ತದ ಸಕ್ಕರೆ, ಬಿಪಿ, ಮತ್ತು ಕ್ಯಾನ್ಸರ್‌ ನಂತಹ ರೋಗಗಳ ಮುನ್ನೆಚ್ಚರಿಕೆ ವಹಿಸಲು, ಹಾಗೆಯೇ ಸರಿಯಾದ ಜೀವನಶೈಲಿ ಅಳವಡಿಸಿಕೊಳ್ಳಲು ವೈದ್ಯರ ಮಾರ್ಗದರ್ಶನ ಪಡೆಯಲು ಸಹಾಯ ಮಾಡುತ್ತದೆ.

ದೊಡ್ಡಬಳ್ಳಾಪುರ ನಗರದ ಹೃದಯ ಭಾಗವಾದ ಖಾಸಬಾಗ್ ದರ್ಗಾಪುರ, ರಂಗಪ್ಪ ಸರ್ಕಲ್ ಈ ಭಾಗದಲ್ಲಿ ಹೆಚ್ಚು ಬಡ ಕುಟಂಬಗಳು ಇದ್ದು, ದಿನ ನಿತ್ಯದ ದುಡಿಮೆ ಊಟ ಬಟ್ಟೆಗೆ ಸಾಲುವುದಿಲ್ಲ ಅದರೆ ಅರೋಗ್ಯ ತಪಾಸಣೆ ಇನ್ನೂ ಯಾವರೀತಿ ಮಾಡುತ್ತಾರೆ ಅದರಿಂದ ನವಚೇತನ ಆಸ್ಪತ್ರೆ  ಉಷ್ಟ್ರತಿ ಎನ್‌ ಜಿ ಓ, ಡಿ ಎಸ್‌ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದರು.

ಆರೋಗ್ಯವೇ ಭಾಗ್ಯ. ಉತ್ತಮ ಆರೋಗ್ಯವು ದೈಹಿಕ, ಮಾನಸಿಕವಾಗಿ ಸದೃಢವಾಗಿರುವ ಸ್ಥಿತಿಯಾಗಿದ್ದು, ಸಂತೋಷದ ಮತ್ತು ಯಶಸ್ವಿ ಜೀವನಕ್ಕೆ ಅಡಿಪಾಯವಾಗಿದೆ. ಇದು ಕಾಯಿಲೆಗಳನ್ನು ತಡೆಗಟ್ಟಲು, ಜೀವನದ ಗುಣಮಟ್ಟವನ್ನು ಹೆಚ್ಚಿಸಲು, ದೈನಂದಿನ ಕಾರ್ಯಕ್ಷಮತೆ ಹೆಚ್ಚಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ನಿರ್ಣಾಯಕವಾಗಿದೆ. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ದೇಹದ ದೃಢವಾಗಿರುತ್ತೆ ಎಂದರು.

ಈ ಸಂದರ್ಭದಲ್ಲಿ ನವಚೇತನ ಆಸ್ಪತ್ರೆಯ ಎಂಡಿ ಡಾ.ರಾಜೇಶ್, ನೇತ್ರ ತಜ್ಞ ಡಾ.ವೈ.ಗಿರೀಶ್, ನಿರ್ದೇಶಕರಾದ ಪ್ರಕಾಶ್, ಮಾರ್ಕೆಟಿಂಗ್ ವಿಭಾಗದ ಮೊಹಮ್ಮದ್ ರಫೀ, ಆನಂದ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

11 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

13 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

24 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago