ಉಚಿತ ಕಾಲುಬಾಯಿ ಲಸಿಕಾ ಅಭಿಯಾನವನ್ನು ಸಮರ್ಪಕವಾಗಿ ಪ್ರಚುರ ಪಡಿಸಿ- ಎಡಿಸಿ ಸೈಯಿದಾ ಆಯಿಷಾ

ಜಾನುವಾರುಗಳಿಗೆ ತಪ್ಪದೇ ಉಚಿತ ಕಾಲು ಬಾಯಿ ಲಸಿಕೆ ಹಾಕಿಸಲು ರೈತರಿಗೆ ಜಾಗೃತಿ ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶವೈದ್ಯಕೀಯ ಸೇವಾ ಇಲಾಖೆ ವತಿಯಿಂದ 8 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಪೂರ್ವಸಿದ್ಧತೆ ಬಗ್ಗೆ ಬುಧವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನವೆಂಬರ್ 03 ರಿಂದ ಡಿಸೆಂಬರ್ 03 ರವರೆಗೆ ಈ ಅಭಿಯಾನ ನಡೆಯಲಿದ್ದು, ಇದರ ಮಾಹಿತಿಯನ್ನು ಬ್ಯಾನರ್, ಭಿತ್ತಿಪತ್ರಗಳ ಮೂಲಕ ರೈತರಿಗೆ ತಲುಪಿಸಿ ವ್ಯಾಪಕ ಪ್ರಚಾರ ಮಾಡಬೇಕು.

ಜಿಲ್ಲೆಯಲ್ಲಿ ಪ್ರಸ್ತುತ ಜಾನುವಾರು ಗಣತಿಯಲ್ಲಿ 1,31,986 ಹಸುಗಳು ಮತ್ತು 9,090 ಎಮ್ಮೆಗಳಿವೆ, ಒಟ್ಟು 1,41,076 ಜಾನುವಾರುಗಳಿವೆ. ಆದ್ದರಿಂದ ಜಿಲ್ಲೆಯಲ್ಲಿ 1738 ಬ್ಲಾಕ್ ಗಳನ್ನಾಗಿ ವಿಂಗಡಿಸಿದ್ದು, ಒಟ್ಟು 134 ತಂಡಗಳಿವೆ. ಇಲಾಖೆಯ ಅಧಿಕಾರಿಗಳು / ಸಿಬ್ಬಂದಿಗಳು, ಬಮೂಲ್ ಸಿಬ್ಬಂದಿಗಳು ಸೇರಿ ಒಟ್ಟು 347 ಲಸಿಕೆದಾರರು ಪ್ರತಿದಿನ ಮುಂಜಾನೆ 5:30 ಯಿಂದ 11 ಗಂಟೆಯ ವರೆಗೆ ನಿಗಧಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಉಚಿತ ಕಾಲುಬಾಯಿ ಜ್ವರದ ಲಸಿಕೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ಪ್ರತಿಯೊಂದು ರಾಸುವಿಗೆ ಒಂದು ಸಿರಿಂಜ್ ಮತ್ತು ನೀಡಲ್ ಗಾಳನ್ನು ಬಳಸಿ ಲಸಿಕೆ ನೀಡಲಾಗುವುದು. ಹಾಗಾಗಿ ಪಶು ಸಾಕಾಣಿಕೆ ಮಾಡುವವರು 3 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಗೂ ಕರುಗಳಿಗೆ 21 ದಿನವಾದ ಬಳಿಕ ಬೂಸ್ಟರ್ ಡೋಸ್ ಲಸಿಕೆಯನ್ನು ಹಾಕಿಸಬೇಕು ಎಂದು ತಿಳಿಸಿದರು.

ಇದರ ಜೊತೆಗೆ ರೇಬೀಸ್ ಅಭಿಯಾನದ ಅಂಗವಾಗಿ ನಾಯಿಗಳಿಗೆ ರೇಬೀಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ನಂತರ 8 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಪಶಸಂಗೋಪನಾ ಮತ್ತು ಪಶವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಡಾ. ಜಗದೀಶ್ ಕುಮಾರ್, ಜಿಲ್ಲಾ ಪಶುವೈದ್ಯಾಧಿಕಾರಿಗಳು, ನಾಲ್ಕು ತಾಲ್ಲೂಕಿನ ಸಹಾಯಕ ನಿರ್ದೇಶಕರು, ಬಮುಲ್ ಮತ್ತು ಕೆ.ಎಂ.ಎಫ್ ನ ಉಪ ವ್ಯವಸ್ಥಾಪಕರುಗಳು,
ಅಧಿಕಾರಿಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

2 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

3 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

5 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

6 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

6 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

7 hours ago