ಉಚಿತ ಕಾಲುಬಾಯಿ ಲಸಿಕಾ ಅಭಿಯಾನವನ್ನು ಸಮರ್ಪಕವಾಗಿ ಪ್ರಚುರ ಪಡಿಸಿ- ಎಡಿಸಿ ಸೈಯಿದಾ ಆಯಿಷಾ

ಜಾನುವಾರುಗಳಿಗೆ ತಪ್ಪದೇ ಉಚಿತ ಕಾಲು ಬಾಯಿ ಲಸಿಕೆ ಹಾಕಿಸಲು ರೈತರಿಗೆ ಜಾಗೃತಿ ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶವೈದ್ಯಕೀಯ ಸೇವಾ ಇಲಾಖೆ ವತಿಯಿಂದ 8 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಪೂರ್ವಸಿದ್ಧತೆ ಬಗ್ಗೆ ಬುಧವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನವೆಂಬರ್ 03 ರಿಂದ ಡಿಸೆಂಬರ್ 03 ರವರೆಗೆ ಈ ಅಭಿಯಾನ ನಡೆಯಲಿದ್ದು, ಇದರ ಮಾಹಿತಿಯನ್ನು ಬ್ಯಾನರ್, ಭಿತ್ತಿಪತ್ರಗಳ ಮೂಲಕ ರೈತರಿಗೆ ತಲುಪಿಸಿ ವ್ಯಾಪಕ ಪ್ರಚಾರ ಮಾಡಬೇಕು.

ಜಿಲ್ಲೆಯಲ್ಲಿ ಪ್ರಸ್ತುತ ಜಾನುವಾರು ಗಣತಿಯಲ್ಲಿ 1,31,986 ಹಸುಗಳು ಮತ್ತು 9,090 ಎಮ್ಮೆಗಳಿವೆ, ಒಟ್ಟು 1,41,076 ಜಾನುವಾರುಗಳಿವೆ. ಆದ್ದರಿಂದ ಜಿಲ್ಲೆಯಲ್ಲಿ 1738 ಬ್ಲಾಕ್ ಗಳನ್ನಾಗಿ ವಿಂಗಡಿಸಿದ್ದು, ಒಟ್ಟು 134 ತಂಡಗಳಿವೆ. ಇಲಾಖೆಯ ಅಧಿಕಾರಿಗಳು / ಸಿಬ್ಬಂದಿಗಳು, ಬಮೂಲ್ ಸಿಬ್ಬಂದಿಗಳು ಸೇರಿ ಒಟ್ಟು 347 ಲಸಿಕೆದಾರರು ಪ್ರತಿದಿನ ಮುಂಜಾನೆ 5:30 ಯಿಂದ 11 ಗಂಟೆಯ ವರೆಗೆ ನಿಗಧಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಉಚಿತ ಕಾಲುಬಾಯಿ ಜ್ವರದ ಲಸಿಕೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ಪ್ರತಿಯೊಂದು ರಾಸುವಿಗೆ ಒಂದು ಸಿರಿಂಜ್ ಮತ್ತು ನೀಡಲ್ ಗಾಳನ್ನು ಬಳಸಿ ಲಸಿಕೆ ನೀಡಲಾಗುವುದು. ಹಾಗಾಗಿ ಪಶು ಸಾಕಾಣಿಕೆ ಮಾಡುವವರು 3 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಗೂ ಕರುಗಳಿಗೆ 21 ದಿನವಾದ ಬಳಿಕ ಬೂಸ್ಟರ್ ಡೋಸ್ ಲಸಿಕೆಯನ್ನು ಹಾಕಿಸಬೇಕು ಎಂದು ತಿಳಿಸಿದರು.

ಇದರ ಜೊತೆಗೆ ರೇಬೀಸ್ ಅಭಿಯಾನದ ಅಂಗವಾಗಿ ನಾಯಿಗಳಿಗೆ ರೇಬೀಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ನಂತರ 8 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಪಶಸಂಗೋಪನಾ ಮತ್ತು ಪಶವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಡಾ. ಜಗದೀಶ್ ಕುಮಾರ್, ಜಿಲ್ಲಾ ಪಶುವೈದ್ಯಾಧಿಕಾರಿಗಳು, ನಾಲ್ಕು ತಾಲ್ಲೂಕಿನ ಸಹಾಯಕ ನಿರ್ದೇಶಕರು, ಬಮುಲ್ ಮತ್ತು ಕೆ.ಎಂ.ಎಫ್ ನ ಉಪ ವ್ಯವಸ್ಥಾಪಕರುಗಳು,
ಅಧಿಕಾರಿಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

16 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago