ಉಚಿತ ಟೈಲರಿಂಗ್ ತರಬೇತಿಗೆ ಆಸಕ್ತ ಮಹಿಳೆಯರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್‌ ಡಿಸೈನಿಂಗ್(ಟೈಲರಿಂಗ್) ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್‌ 12 ರಿಂದ ಆರಂಭವಾಗಲಿದ್ದು, ಏಪ್ರಿಲ್‌ 12 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

8 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

17 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago