ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

6 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

6 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

9 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago