ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಕಾಲಾವಧಿಯ ಉಚಿತ ಬ್ಯೂಟಿ ಪಾಲ೯ರ್ ಮ್ಯಾನೇಜ್ ಮೆಂಟ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 27-12-2023 ಬುಧವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644, 9535774621 ಸಂಪರ್ಕಿಸಬಹುದಾಗಿದೆ.
ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್ https://docs.google.com/forms/d/1xDvF4Tozn-HlRBRbikHKVudJGDkFPiBb2Y0jS996Cus/edit?chromeless=1
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…