ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಕಾಲಾವಧಿಯ ಉಚಿತ ಬ್ಯೂಟಿ ಪಾಲ೯ರ್ ಮ್ಯಾನೇಜ್ ಮೆಂಟ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 27-12-2023 ಬುಧವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644, 9535774621 ಸಂಪರ್ಕಿಸಬಹುದಾಗಿದೆ.
ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್ https://docs.google.com/forms/d/1xDvF4Tozn-HlRBRbikHKVudJGDkFPiBb2Y0jS996Cus/edit?chromeless=1
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…