ಉಚಿತ ಬ್ರೈಲ್ ಕಿಟ್ ವಿತರಣೆಗಾಗಿ ಅಂಧ ವಿಕಲಚೇತನರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿಕಲಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇತ್ತೀಚಿನ ತಂತ್ರಜ್ಞಾನ ಮತ್ತು ತಂತ್ರಾಂಶದ ಉಪಯೋಗದಿಂದ ಉನ್ನತ ಶಿಕ್ಷಣವನ್ನು ಹೊಂದಲು ಅನುಕೂಲವಾಗುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಉಚಿತವಾಗಿ ಬ್ರೈಲ್‌ ಕಿಟ್ ನೀಡಲಾಗುವುದು.

ಅರ್ಜಿ ನಮೂನೆಯನ್ನು ತಮ್ಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲೂ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದು ಅ. 25ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕಾಗಿದೆ.

ಷರತ್ತುಗಳು

1.ಅಂಧ ವ್ಯಕ್ತಿಗಳು ಭಾರತದ ಪ್ರಜೆಯಾಗಿರಬೇಕು ಮತ್ತು ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳು ವಾಸವಾಗಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಪಡೆದು ಪ್ರತಿ ಸಲ್ಲಿಸುವುದು.

2.ಎಸ್.ಎಸ್.ಎಲ್.ಸಿ ಹಾಗೂ ನಂತರದ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಮಾತ್ರ ಬ್ರೈಲ್‌ಕಿಟ್ ನೀಡುವುದು.

3.ಬ್ರೈಲ್‌ಕಿಟ್ ಪಡೆಯುವ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಕಾಲೇಜು /ಸಂಸ್ಥೆಯ ಮಖ್ಯಸ್ಥರಿಂದ ದೃಢೀಕರಣ ಶಿಫಾರಸ್ಸಿನೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸುವುದು.

4.ಈ ಯೋಜನೆಯ ಸೌಲಭ್ಯ ಪಡೆಯಲು ಯಾವುದೇ ಆದಾಯ ಮಿತಿ ಇರುವುದಿಲ್ಲ.

5.ಸರ್ಕಾರ ನೀಡುವ ಬ್ರೈಲ್‌ಕಿಟ್ ಅನ್ನು ಯಾವುದೇ ಕಾರಣಕ್ಕೆ ಪರಬಾರೆ ಮಾಡಬಾರದು ಮಾಡಿದ್ದು ಕಂಡುಬಂದಲ್ಲಿ ಅಂತವರ ಮೇಲೆ ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

6.ಬ್ರೈಲ್‌ಕಿಟ್ ಅನ್ನು ಪಡೆಯುವ ವಿದ್ಯಾರ್ಥಿಯು ರೂ.100/- ಗಳ ಛಾಪ ಕಾಗದದಲ್ಲಿ ಮುಚ್ಚಳಿಕೆ ಬರೆದು ಕೊಡುವುದು.

7.ಬ್ರೈಲ್‌ಕಿಟ್ ಅನ್ನು ಪಡೆಯುವ ವಿದ್ಯಾರ್ಥಿಯು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸುವುದು.

8.ಈ ಸೌಲಭ್ಯವನ್ನು ಪಡೆಯುವ ವಿಕಲಚೇತನ ವಿದ್ಯಾರ್ಥಿಗಳು ಶೇಕಡ 40% ಕ್ಕಿಂತ ಹೆಚ್ಚು ದೃಷ್ಟಿ ದೋಷವುಳ್ಳವರಾಗಿರಬೇಕು.

9.ಅರ್ಜಿ ಸಲ್ಲಿಸುವ ವಿಕಲಚೇತನ ವಿದ್ಯಾರ್ಥಿಗಳು ವಿಕಲಚೇತನ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ಕಾರ್ಡ್ ಪ್ರತಿ ಕಡ್ಡಾಯವಾಗಿ ಸಲ್ಲಿಸುವುದು.

10.ಬ್ರೈಲ್‌ಕಿಟ್ ಅನ್ನು ವಿದ್ಯಾರ್ಥಿಗಳು ಶಿಕ್ಷಣದ ಸಲುವಾಗಿಯೇ ಉಪಯೋಗಿಸತಕ್ಕದ್ದು.

11.ಬ್ರೈಲ್‌ಕಿಟ್ ಅನ್ನು ಒಂದು ವಿದ್ಯಾರ್ಥಿಗೆ ಜೀವಿತ ಕಾಲದಲ್ಲಿ ಒಂದು ಬಾರಿ ಮಾತ್ರ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಬೇರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಲ್ಯಾಪ್ ಟಾಪ್ ಅನ್ನು ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.

12.ಬ್ರೈಲ್‌ಕಿಟ್ ಅನ್ನು ಸ್ವೀಕರಿಸಿರುವ ಅರ್ಜಿಗಳ ಜೇಷ್ಠತೆ ಅನುಸಾರ ವಿತರಿಸಲಾಗುವುದು.

ನಿಯತ ಕಾಲಿತ ವಿದ್ಯಾರ್ಥಿಗಳು ಮಾತ್ರ ಮೇಲಿನ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಯನ್ನು ವಿಕಲಚೇತನರ ಸಹಾಯವಾಣಿ ಸಂಖ್ಯೆ 080-29787441 ಗೆ ಕರೆ ಮಾಡಬಹುದು ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಜಿಲ್ಲಾಡಳಿತ ಭವನ, ನಂ.03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಳಾಸವನ್ನು ಸಂಪರ್ಕಿಸಬಹುದು  ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್‌.ಎಂ ಅವರು‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

6 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

7 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

14 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago