ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಗೆ ಅಧಿಕೃತ ಚಾಲನೆ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗಿದೆ.

ಜೂನ್ 12ರಿಂದಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಸಾರಿಗೆ ಇಲಾಖೆ ಈ ಕುರಿತು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಉಚಿತ ಬಸ್ ಪಾಸ್ ಪಡೆಯಬಹುದಾಗಿದೆ.

ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಡಿ ಈಗಾಗಲೇ ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ದೊರೆಯುತ್ತಿರುವುದರಿಂದ ಅವರಿಗೆ ಪ್ರತ್ಯೇಕ ವಿದ್ಯಾರ್ಥಿ ಬಸ್ ಪಾಸ್ ಅಗತ್ಯವಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿರುವ ಹೊಸ ಯೋಜನೆ ಕೇವಲ ಗಂಡು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ 15 ದಿನಗಳೊಳಗೆ ಪಾವತಿಸಿದ ಮೊತ್ತವನ್ನು ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಯೋಜನೆ ಜಾರಿಗೆ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು ₹86.86 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು ತಮ್ಮ ಮೊಬೈಲ್, ಸೈಬರ್ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ನಾಡಕಚೇರಿಗಳ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅಗತ್ಯ ದಾಖಲೆಗಳು:

1.ಆಧಾರ್ ಕಾರ್ಡ್

2.ಶಾಲೆ ಅಥವಾ ಕಾಲೇಜಿನ ಪ್ರವೇಶಾತಿ ರಶೀದಿ

3.ಇತ್ತೀಚಿನ ಎರಡು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರಗಳು

4.ವಿದ್ಯಾಸಂಸ್ಥೆಯ ಮುಖ್ಯಸ್ಥರ ಸಹಿ ಮತ್ತು ಅಧಿಕೃತ ಸೀಲ್ ಹೊಂದಿರುವ ಅರ್ಜಿ ಪ್ರತಿ

ಪಾಸ್ ವಿತರಣೆ ಪ್ರಕ್ರಿಯೆ

ಆನ್‌ಲೈನ್ ಅರ್ಜಿಗಳನ್ನು ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಅರ್ಜಿ ಅನುಮೋದನೆಯಾದ ಬಳಿಕ ವಿದ್ಯಾರ್ಥಿಯ ಮೊಬೈಲ್‌ಗೆ ಎಸ್‌ಎಂಎಸ್ ಸಂದೇಶ ಕಳುಹಿಸಲಾಗುತ್ತದೆ. ನಂತರ ನಿಗದಿತ ಕೇಂದ್ರಗಳಲ್ಲಿ ಭೌತಿಕ ಬಸ್ ಪಾಸ್ ಪಡೆಯಬಹುದಾಗಿದೆ.

ಪಾಸ್ ವಿತರಣಾ ಕೇಂದ್ರಗಳು

ಬೆಂಗಳೂರಿನ ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಹೊಸಕೋಟೆ ಹಾಗೂ ಆನೇಕಲ್ ಟಿಟಿಎಂಸಿ ಕೇಂದ್ರಗಳ ಜೊತೆಗೆ ರಾಜ್ಯದ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಉಚಿತ ಬಸ್ ಪಾಸ್ ವಿತರಣೆ ನಡೆಯಲಿದೆ.

ಮುಖ್ಯ ಷರತ್ತುಗಳು

1. ವಿದ್ಯಾರ್ಥಿ ಪಾಸ್‌ಗೆ ಸಂಬಂಧಿಸಿದ ಹಾಲಿ ಅರ್ಹತಾ ಮಾನದಂಡಗಳು, ದೂರದ ಮಿತಿ ಹಾಗೂ ಪಾಸ್ ಅವಧಿ ನಿಯಮಗಳು ಮುಂದುವರಿಯಲಿವೆ.

2. ಸೇವಾಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

3. ಈಗಾಗಲೇ ವಿತರಿಸಿರುವ ಪಾಸ್‌ಗಳು ಯಥಾಸ್ಥಿತಿಯಲ್ಲಿ ಮಾನ್ಯವಾಗಿರುತ್ತವೆ.

4. ಕರ್ನಾಟಕದಲ್ಲಿ ವಾಸವಿದ್ದು ನೆರೆರಾಜ್ಯಗಳಲ್ಲಿ ಓದುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಯೋಜನೆ ಅನ್ವಯವಾಗಲಿದೆ.

5. ಹಣ ಪಾವತಿಸಿ ಪಡೆದಿರುವ ಪಾಸ್‌ಗಳ ಶುಲ್ಕವನ್ನು 15 ದಿನಗಳೊಳಗೆ ಮರುಪಾವತಿಸಲಾಗುವುದು.

6. ಈ ಯೋಜನೆಯಿಂದ ಸಾವಿರಾರು ವಿದ್ಯಾರ್ಥಿಗಳ ಪ್ರಯಾಣ ವೆಚ್ಚ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Ramesh Babu

Journalist

Recent Posts

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

22 minutes ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

1 hour ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

4 hours ago

‘ಬೆಂಗಳೂರಿನಲ್ಲಿ ಜನಸಂಖ್ಯೆ ವಾರ್ಷಿಕ ಬೆಳವಣಿಗೆ ದರ 3.7%, ವಾಹನ ಸಂಖ್ಯೆ ಬೆಳವಣಿಗೆ ದರ 10% ನಷ್ಟಿದೆ’

ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ…

4 hours ago

ವರ್ಷಾಂತ್ಯದೊಳಗೆ ಪಂಚಾಯಿತಿ ಚುನಾವಣೆ- ಸಚಿವ ಈಶ್ವರ ಖಂಡ್ರೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್ ಮಾಡುವಂತೆ ಗ್ರಾಮೀಣಾಭಿವೃದ್ಧಿ…

15 hours ago

ದೊಡ್ಡಬಳ್ಳಾಪುರದಲ್ಲಿ 6 ಕೆಜಿ 126 ಗ್ರಾಂ ಅಕ್ರಮ ಒಣ ಗಾಂಜಾ ವಶ: ಉತ್ತರ ಪ್ರದೇಶ ಮೂಲದ ಯುವಕ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 6 ಕೆಜಿ 126 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪೊಲೀಸರು…

19 hours ago