ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಗೆ ಅಧಿಕೃತ ಚಾಲನೆ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗಿದೆ.

ಜೂನ್ 12ರಿಂದಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಸಾರಿಗೆ ಇಲಾಖೆ ಈ ಕುರಿತು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಉಚಿತ ಬಸ್ ಪಾಸ್ ಪಡೆಯಬಹುದಾಗಿದೆ.

ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಡಿ ಈಗಾಗಲೇ ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ದೊರೆಯುತ್ತಿರುವುದರಿಂದ ಅವರಿಗೆ ಪ್ರತ್ಯೇಕ ವಿದ್ಯಾರ್ಥಿ ಬಸ್ ಪಾಸ್ ಅಗತ್ಯವಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿರುವ ಹೊಸ ಯೋಜನೆ ಕೇವಲ ಗಂಡು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ 15 ದಿನಗಳೊಳಗೆ ಪಾವತಿಸಿದ ಮೊತ್ತವನ್ನು ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಯೋಜನೆ ಜಾರಿಗೆ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು ₹86.86 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು ತಮ್ಮ ಮೊಬೈಲ್, ಸೈಬರ್ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ನಾಡಕಚೇರಿಗಳ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅಗತ್ಯ ದಾಖಲೆಗಳು:

1.ಆಧಾರ್ ಕಾರ್ಡ್

2.ಶಾಲೆ ಅಥವಾ ಕಾಲೇಜಿನ ಪ್ರವೇಶಾತಿ ರಶೀದಿ

3.ಇತ್ತೀಚಿನ ಎರಡು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರಗಳು

4.ವಿದ್ಯಾಸಂಸ್ಥೆಯ ಮುಖ್ಯಸ್ಥರ ಸಹಿ ಮತ್ತು ಅಧಿಕೃತ ಸೀಲ್ ಹೊಂದಿರುವ ಅರ್ಜಿ ಪ್ರತಿ

ಪಾಸ್ ವಿತರಣೆ ಪ್ರಕ್ರಿಯೆ

ಆನ್‌ಲೈನ್ ಅರ್ಜಿಗಳನ್ನು ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಅರ್ಜಿ ಅನುಮೋದನೆಯಾದ ಬಳಿಕ ವಿದ್ಯಾರ್ಥಿಯ ಮೊಬೈಲ್‌ಗೆ ಎಸ್‌ಎಂಎಸ್ ಸಂದೇಶ ಕಳುಹಿಸಲಾಗುತ್ತದೆ. ನಂತರ ನಿಗದಿತ ಕೇಂದ್ರಗಳಲ್ಲಿ ಭೌತಿಕ ಬಸ್ ಪಾಸ್ ಪಡೆಯಬಹುದಾಗಿದೆ.

ಪಾಸ್ ವಿತರಣಾ ಕೇಂದ್ರಗಳು

ಬೆಂಗಳೂರಿನ ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಹೊಸಕೋಟೆ ಹಾಗೂ ಆನೇಕಲ್ ಟಿಟಿಎಂಸಿ ಕೇಂದ್ರಗಳ ಜೊತೆಗೆ ರಾಜ್ಯದ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಉಚಿತ ಬಸ್ ಪಾಸ್ ವಿತರಣೆ ನಡೆಯಲಿದೆ.

ಮುಖ್ಯ ಷರತ್ತುಗಳು

1. ವಿದ್ಯಾರ್ಥಿ ಪಾಸ್‌ಗೆ ಸಂಬಂಧಿಸಿದ ಹಾಲಿ ಅರ್ಹತಾ ಮಾನದಂಡಗಳು, ದೂರದ ಮಿತಿ ಹಾಗೂ ಪಾಸ್ ಅವಧಿ ನಿಯಮಗಳು ಮುಂದುವರಿಯಲಿವೆ.

2. ಸೇವಾಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

3. ಈಗಾಗಲೇ ವಿತರಿಸಿರುವ ಪಾಸ್‌ಗಳು ಯಥಾಸ್ಥಿತಿಯಲ್ಲಿ ಮಾನ್ಯವಾಗಿರುತ್ತವೆ.

4. ಕರ್ನಾಟಕದಲ್ಲಿ ವಾಸವಿದ್ದು ನೆರೆರಾಜ್ಯಗಳಲ್ಲಿ ಓದುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಯೋಜನೆ ಅನ್ವಯವಾಗಲಿದೆ.

5. ಹಣ ಪಾವತಿಸಿ ಪಡೆದಿರುವ ಪಾಸ್‌ಗಳ ಶುಲ್ಕವನ್ನು 15 ದಿನಗಳೊಳಗೆ ಮರುಪಾವತಿಸಲಾಗುವುದು.

6. ಈ ಯೋಜನೆಯಿಂದ ಸಾವಿರಾರು ವಿದ್ಯಾರ್ಥಿಗಳ ಪ್ರಯಾಣ ವೆಚ್ಚ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

3 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

5 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

15 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

15 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

19 hours ago