ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಗೆ ಅಧಿಕೃತ ಚಾಲನೆ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗಿದೆ.

ಜೂನ್ 12ರಿಂದಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಸಾರಿಗೆ ಇಲಾಖೆ ಈ ಕುರಿತು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಉಚಿತ ಬಸ್ ಪಾಸ್ ಪಡೆಯಬಹುದಾಗಿದೆ.

ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಡಿ ಈಗಾಗಲೇ ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ದೊರೆಯುತ್ತಿರುವುದರಿಂದ ಅವರಿಗೆ ಪ್ರತ್ಯೇಕ ವಿದ್ಯಾರ್ಥಿ ಬಸ್ ಪಾಸ್ ಅಗತ್ಯವಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿರುವ ಹೊಸ ಯೋಜನೆ ಕೇವಲ ಗಂಡು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ 15 ದಿನಗಳೊಳಗೆ ಪಾವತಿಸಿದ ಮೊತ್ತವನ್ನು ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಯೋಜನೆ ಜಾರಿಗೆ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು ₹86.86 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು ತಮ್ಮ ಮೊಬೈಲ್, ಸೈಬರ್ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ನಾಡಕಚೇರಿಗಳ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅಗತ್ಯ ದಾಖಲೆಗಳು:

1.ಆಧಾರ್ ಕಾರ್ಡ್

2.ಶಾಲೆ ಅಥವಾ ಕಾಲೇಜಿನ ಪ್ರವೇಶಾತಿ ರಶೀದಿ

3.ಇತ್ತೀಚಿನ ಎರಡು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರಗಳು

4.ವಿದ್ಯಾಸಂಸ್ಥೆಯ ಮುಖ್ಯಸ್ಥರ ಸಹಿ ಮತ್ತು ಅಧಿಕೃತ ಸೀಲ್ ಹೊಂದಿರುವ ಅರ್ಜಿ ಪ್ರತಿ

ಪಾಸ್ ವಿತರಣೆ ಪ್ರಕ್ರಿಯೆ

ಆನ್‌ಲೈನ್ ಅರ್ಜಿಗಳನ್ನು ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಅರ್ಜಿ ಅನುಮೋದನೆಯಾದ ಬಳಿಕ ವಿದ್ಯಾರ್ಥಿಯ ಮೊಬೈಲ್‌ಗೆ ಎಸ್‌ಎಂಎಸ್ ಸಂದೇಶ ಕಳುಹಿಸಲಾಗುತ್ತದೆ. ನಂತರ ನಿಗದಿತ ಕೇಂದ್ರಗಳಲ್ಲಿ ಭೌತಿಕ ಬಸ್ ಪಾಸ್ ಪಡೆಯಬಹುದಾಗಿದೆ.

ಪಾಸ್ ವಿತರಣಾ ಕೇಂದ್ರಗಳು

ಬೆಂಗಳೂರಿನ ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಹೊಸಕೋಟೆ ಹಾಗೂ ಆನೇಕಲ್ ಟಿಟಿಎಂಸಿ ಕೇಂದ್ರಗಳ ಜೊತೆಗೆ ರಾಜ್ಯದ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಉಚಿತ ಬಸ್ ಪಾಸ್ ವಿತರಣೆ ನಡೆಯಲಿದೆ.

ಮುಖ್ಯ ಷರತ್ತುಗಳು

1. ವಿದ್ಯಾರ್ಥಿ ಪಾಸ್‌ಗೆ ಸಂಬಂಧಿಸಿದ ಹಾಲಿ ಅರ್ಹತಾ ಮಾನದಂಡಗಳು, ದೂರದ ಮಿತಿ ಹಾಗೂ ಪಾಸ್ ಅವಧಿ ನಿಯಮಗಳು ಮುಂದುವರಿಯಲಿವೆ.

2. ಸೇವಾಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

3. ಈಗಾಗಲೇ ವಿತರಿಸಿರುವ ಪಾಸ್‌ಗಳು ಯಥಾಸ್ಥಿತಿಯಲ್ಲಿ ಮಾನ್ಯವಾಗಿರುತ್ತವೆ.

4. ಕರ್ನಾಟಕದಲ್ಲಿ ವಾಸವಿದ್ದು ನೆರೆರಾಜ್ಯಗಳಲ್ಲಿ ಓದುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಯೋಜನೆ ಅನ್ವಯವಾಗಲಿದೆ.

5. ಹಣ ಪಾವತಿಸಿ ಪಡೆದಿರುವ ಪಾಸ್‌ಗಳ ಶುಲ್ಕವನ್ನು 15 ದಿನಗಳೊಳಗೆ ಮರುಪಾವತಿಸಲಾಗುವುದು.

6. ಈ ಯೋಜನೆಯಿಂದ ಸಾವಿರಾರು ವಿದ್ಯಾರ್ಥಿಗಳ ಪ್ರಯಾಣ ವೆಚ್ಚ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Ramesh Babu

Journalist

Recent Posts

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

6 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

12 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

13 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago