ಉಚಿತ ಸಿಸಿಟಿವಿ ರಿಪೇರಿ ಮತ್ತು ಅಳವಡಿಕೆ ತರಬೇತಿ


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 13 ದಿನಗಳ ಕಾಲಾವಧಿಯ ಉಚಿತ ಸಿಸಿಟಿವಿ ರಿಪೇರಿ ಮತ್ತು ಅಳವಡಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತಕರು 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 08-09-2025 ರಂದು ಸೋಮವಾರ ಸಂಸ್ಥೆಯಲ್ಲಿ ನಡೆಯುವ ತರಬೇತಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.

ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644.ಸಂಪರ್ಕಿಸಬಹುದಾಗಿದೆ.

ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್,
👇👇👇 https://docs.google.com/forms/d/e/1FAIpQLScttLp4qkdzhidYKn71_YjlyizVQP3nUUx-388akDMpZFzrOA/viewform?usp=sharing&ouid=116915943280505042190

*ಸಂಸ್ಥೆಯ ಲೊಕೇಶನ್ ಲಿಂಕ್:-*
👇👇👇 https://maps.app.goo.gl/BpH44CwHmZaXSd9j6

*ವಿಶೇಷ ಸೂಚನೆ:- ಹೊಸಕೋಟೆಯಿಂದ ತರಬೇತಿ ಸಂಸ್ಥೆಗೆ, ತರಬೇತಿಗೆ ಬರಲು BMTC ಬಸ್ ವ್ಯವಸ್ಥೆ ಇದೆ.

Ramesh Babu

Journalist

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

1 hour ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

19 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

20 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

20 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

20 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

23 hours ago