ಉಚಿತ ಸುಧಾರಿತ ಸಲಕರಣೆ ಪಡೆಯಲು ವೃತ್ತಿಪರ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ವತಿಯಿಂದ 2023-24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ 624 ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ಗ್ರಾಮ ಪಂಚಾಯಿತಿ ಧೃಢೀಕರಣದೊಂದಿಗೆ ಅ.31 ರೊಳಗಾಗಿ ಸಂಬಂಧಿಸಿದ ತಾಲ್ಲೂಕಿನ ಕೈಗಾರಿಕ ವಿಸ್ತರಣಾಧಿಕಾರಿ ಕಚೇರಿಗೆ ಸಲ್ಲಿಸುವುದು.

ನಿಬಂದನೆಗಳು:

1. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಟ 18 ವರ್ಷ

2. ಅರ್ಜಿದಾರರು ಗ್ರಾಮದಲ್ಲಿ ವಾಸವುಳ್ಳವರಾಗಿರಬೇಕು.

3. ಸಮಾಜದಲ್ಲಿ ಸಾಮಾಜಿಕ ತೊಂದರೆಗೊಳಗಾದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು (ವಿಧವೆಯರು, ವಿಚ್ಛೇದಿತರು, ಅನಾಥರು)

4. ಉಚಿತ ಉಪಕರಣ ಪಡೆಯಲು ಜಿಲ್ಲೆಯ 624 ಗ್ರಾಮೀಣ ಆಧುನಿಕ ಕಸುಬುಗಳಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ವಿದ್ಯುತ್ ಚಾಲಿತ ಉಪಕರಣಗಳಾದ Welding, Barbending, Carpentry, Motor rewinding, plumbing and Electrician, ಬಡಗಿ, ಕಮ್ಮಾರಿಕೆ, ಕಲ್ಲುಕುಟಿಕೆ, ದೋಬಿ, ಗಾರೆ, ಮತ್ತು ಇತ್ಯಾದಿ ಕೆಲಸದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತಾ ಸಲಕರಣ ಕಿಟ್‌ಗಳನ್ನು ನೀಡುವ ಕಾರ್ಯಕ್ರಮ

5. ಕುಶಲಕರ್ಮಿಗಳು ಮಾತ್ರ ಅರ್ಜಿಸಲ್ಲಿಸತಕ್ಕದ್ದು.

6. ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.

7. ಈ ಇಲಾಖೆಯ ಯಾವುದೇ ಯೋಜನೆಯಡಿ ಈಗಾಗಲೇ ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.

8. ಸರ್ಕಾರದ ಮಾರ್ಗಸೂಚಿಯಂತೆ ಮೀಸಲಾತಿ ಅನ್ವಯ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

11 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

11 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

14 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

14 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

23 hours ago