ಉಚಿತ ಸುಧಾರಿತ ಸಲಕರಣೆ ಪಡೆಯಲು ವೃತ್ತಿಪರ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ವತಿಯಿಂದ 2023-24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ 624 ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ಗ್ರಾಮ ಪಂಚಾಯಿತಿ ಧೃಢೀಕರಣದೊಂದಿಗೆ ಅ.31 ರೊಳಗಾಗಿ ಸಂಬಂಧಿಸಿದ ತಾಲ್ಲೂಕಿನ ಕೈಗಾರಿಕ ವಿಸ್ತರಣಾಧಿಕಾರಿ ಕಚೇರಿಗೆ ಸಲ್ಲಿಸುವುದು.

ನಿಬಂದನೆಗಳು:

1. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಟ 18 ವರ್ಷ

2. ಅರ್ಜಿದಾರರು ಗ್ರಾಮದಲ್ಲಿ ವಾಸವುಳ್ಳವರಾಗಿರಬೇಕು.

3. ಸಮಾಜದಲ್ಲಿ ಸಾಮಾಜಿಕ ತೊಂದರೆಗೊಳಗಾದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು (ವಿಧವೆಯರು, ವಿಚ್ಛೇದಿತರು, ಅನಾಥರು)

4. ಉಚಿತ ಉಪಕರಣ ಪಡೆಯಲು ಜಿಲ್ಲೆಯ 624 ಗ್ರಾಮೀಣ ಆಧುನಿಕ ಕಸುಬುಗಳಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ವಿದ್ಯುತ್ ಚಾಲಿತ ಉಪಕರಣಗಳಾದ Welding, Barbending, Carpentry, Motor rewinding, plumbing and Electrician, ಬಡಗಿ, ಕಮ್ಮಾರಿಕೆ, ಕಲ್ಲುಕುಟಿಕೆ, ದೋಬಿ, ಗಾರೆ, ಮತ್ತು ಇತ್ಯಾದಿ ಕೆಲಸದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತಾ ಸಲಕರಣ ಕಿಟ್‌ಗಳನ್ನು ನೀಡುವ ಕಾರ್ಯಕ್ರಮ

5. ಕುಶಲಕರ್ಮಿಗಳು ಮಾತ್ರ ಅರ್ಜಿಸಲ್ಲಿಸತಕ್ಕದ್ದು.

6. ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.

7. ಈ ಇಲಾಖೆಯ ಯಾವುದೇ ಯೋಜನೆಯಡಿ ಈಗಾಗಲೇ ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.

8. ಸರ್ಕಾರದ ಮಾರ್ಗಸೂಚಿಯಂತೆ ಮೀಸಲಾತಿ ಅನ್ವಯ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

10 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

15 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

17 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

18 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

22 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago