ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ವತಿಯಿಂದ 2023-24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ 624 ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ಗ್ರಾಮ ಪಂಚಾಯಿತಿ ಧೃಢೀಕರಣದೊಂದಿಗೆ ಅ.31 ರೊಳಗಾಗಿ ಸಂಬಂಧಿಸಿದ ತಾಲ್ಲೂಕಿನ ಕೈಗಾರಿಕ ವಿಸ್ತರಣಾಧಿಕಾರಿ ಕಚೇರಿಗೆ ಸಲ್ಲಿಸುವುದು.
ನಿಬಂದನೆಗಳು:
1. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಟ 18 ವರ್ಷ
2. ಅರ್ಜಿದಾರರು ಗ್ರಾಮದಲ್ಲಿ ವಾಸವುಳ್ಳವರಾಗಿರಬೇಕು.
3. ಸಮಾಜದಲ್ಲಿ ಸಾಮಾಜಿಕ ತೊಂದರೆಗೊಳಗಾದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು (ವಿಧವೆಯರು, ವಿಚ್ಛೇದಿತರು, ಅನಾಥರು)
4. ಉಚಿತ ಉಪಕರಣ ಪಡೆಯಲು ಜಿಲ್ಲೆಯ 624 ಗ್ರಾಮೀಣ ಆಧುನಿಕ ಕಸುಬುಗಳಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ವಿದ್ಯುತ್ ಚಾಲಿತ ಉಪಕರಣಗಳಾದ Welding, Barbending, Carpentry, Motor rewinding, plumbing and Electrician, ಬಡಗಿ, ಕಮ್ಮಾರಿಕೆ, ಕಲ್ಲುಕುಟಿಕೆ, ದೋಬಿ, ಗಾರೆ, ಮತ್ತು ಇತ್ಯಾದಿ ಕೆಲಸದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತಾ ಸಲಕರಣ ಕಿಟ್ಗಳನ್ನು ನೀಡುವ ಕಾರ್ಯಕ್ರಮ
5. ಕುಶಲಕರ್ಮಿಗಳು ಮಾತ್ರ ಅರ್ಜಿಸಲ್ಲಿಸತಕ್ಕದ್ದು.
6. ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.
7. ಈ ಇಲಾಖೆಯ ಯಾವುದೇ ಯೋಜನೆಯಡಿ ಈಗಾಗಲೇ ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.
8. ಸರ್ಕಾರದ ಮಾರ್ಗಸೂಚಿಯಂತೆ ಮೀಸಲಾತಿ ಅನ್ವಯ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…