ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.
ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಕೆ.ಆರ್ ಮಾರುಕಟ್ಟೆ ವೃತ್ತದ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಶಾಲಾ ಶುಲ್ಕ ಕಡಿತ , ಆರೋಗ್ಯ ಸೇವೆ ಸೇರಿದಂತೆ ಇತರ ಸೇವೆಗಳನ್ನು ನಮ್ಮ ಪಕ್ಷದ ವತಿಯಿಂದ ಉಚಿತವಾಗಿ ನೀಡುವ ಸಂಕಲ್ಪ ಮಾಡಿದ್ದೇವೆ ಹೀಗಾಗಿ ಜನತೆ ಕೆ.ಆರ್.ಎಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಬೇಕು ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲು ಬಂದಿರುವವರು ರಿಯಲ್ ಎಸ್ಟೇಟ್ ಉದ್ಯಮಿಗಳು, ಜೆಸಿಬಿ ಪಕ್ಷಗಳಿಂದ ಸ್ಪರ್ಧೆ ಮಾಡುವವರು ಸಾವಿರಾರು ಕೋಟಿ ರೂಪಾಯಿಗಳ ಒಡೆಯರು, ಈ ಬಾರಿ ನಮ್ಮ ವೋಟುಗಳನ್ನು ಕೊಳ್ಳುವುದಕ್ಕೆ ನಾವು ಬಿಡಬಾರದು, ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗಳ ಏಳಿಗೆಗಾಗಿ ನಮ್ಮ ಕೆ.ಆರ್.ಎಸ್ ಪಕ್ಷವನ್ನು ಬೆಂಬಲಿಸಿ ಎಂದರು.
ಈ ವೇಳೆ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್ ಸೇರಿದಂತೆ ಕಾರ್ಯಕರ್ತರು ಇದ್ದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…