ಉತ್ತಮ ಆಡಳಿತಕ್ಕಾಗಿ ಕೆ.ಆರ್.ಎಸ್ ಪಕ್ಷ ಬೆಂಬಲಿಸಿ- ರವಿಕೃಷ್ಣಾ ರೆಡ್ಡಿ

ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.

ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಕೆ.ಆರ್ ಮಾರುಕಟ್ಟೆ ವೃತ್ತದ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಶಾಲಾ ಶುಲ್ಕ ಕಡಿತ , ಆರೋಗ್ಯ ಸೇವೆ ಸೇರಿದಂತೆ ಇತರ ಸೇವೆಗಳನ್ನು ನಮ್ಮ ಪಕ್ಷದ ವತಿಯಿಂದ ಉಚಿತವಾಗಿ ನೀಡುವ ಸಂಕಲ್ಪ ಮಾಡಿದ್ದೇವೆ ಹೀಗಾಗಿ ಜನತೆ ಕೆ.ಆರ್.ಎಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಬೇಕು ಎಂದರು.

ನಮ್ಮ ಪಕ್ಷ ಕಡು ಭ್ರಷ್ಟರ ವಿರುದ್ದ ಹೋರಾಟ ನಡೆಸುತ್ತಿದೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಹಣ, ಹೆಂಡ ಹಂಚಲು ಬಂದಾಗ ಹಿಡುದು ಪ್ರಶ್ನೆ ಮಾಡಬೇಕು, ಹಣವನ್ನು ಸೀಜ್ ಮಾಡಬೇಕು, ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ‌ ಅಪರಾಧ, ಹಣ ಹಂಚಿಕೆ‌ ಎಲ್ಲೇ ಮಾಡಿದರು ಹಿಡಿದು ಪೊಲೀಸರ ಗಮನಕ್ಕೆ ತರಬೇಕು ಎಂದು ತಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ‌ ಮಾಡಲು ಬಂದಿರುವವರು ರಿಯಲ್ ಎಸ್ಟೇಟ್ ಉದ್ಯಮಿಗಳು, ಜೆಸಿಬಿ ಪಕ್ಷಗಳಿಂದ ಸ್ಪರ್ಧೆ ಮಾಡುವವರು ಸಾವಿರಾರು ಕೋಟಿ ರೂಪಾಯಿಗಳ ಒಡೆಯರು, ಈ ಬಾರಿ ನಮ್ಮ ವೋಟುಗಳನ್ನು ಕೊಳ್ಳುವುದಕ್ಕೆ ನಾವು ಬಿಡಬಾರದು, ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗಳ ಏಳಿಗೆಗಾಗಿ ನಮ್ಮ ಕೆ.ಆರ್.ಎಸ್ ಪಕ್ಷವನ್ನು ಬೆಂಬಲಿಸಿ ಎಂದರು.

ಈ ವೇಳೆ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್ ಸೇರಿದಂತೆ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

2 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

3 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

9 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

10 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

16 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago