ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.
ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಕೆ.ಆರ್ ಮಾರುಕಟ್ಟೆ ವೃತ್ತದ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಶಾಲಾ ಶುಲ್ಕ ಕಡಿತ , ಆರೋಗ್ಯ ಸೇವೆ ಸೇರಿದಂತೆ ಇತರ ಸೇವೆಗಳನ್ನು ನಮ್ಮ ಪಕ್ಷದ ವತಿಯಿಂದ ಉಚಿತವಾಗಿ ನೀಡುವ ಸಂಕಲ್ಪ ಮಾಡಿದ್ದೇವೆ ಹೀಗಾಗಿ ಜನತೆ ಕೆ.ಆರ್.ಎಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಬೇಕು ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲು ಬಂದಿರುವವರು ರಿಯಲ್ ಎಸ್ಟೇಟ್ ಉದ್ಯಮಿಗಳು, ಜೆಸಿಬಿ ಪಕ್ಷಗಳಿಂದ ಸ್ಪರ್ಧೆ ಮಾಡುವವರು ಸಾವಿರಾರು ಕೋಟಿ ರೂಪಾಯಿಗಳ ಒಡೆಯರು, ಈ ಬಾರಿ ನಮ್ಮ ವೋಟುಗಳನ್ನು ಕೊಳ್ಳುವುದಕ್ಕೆ ನಾವು ಬಿಡಬಾರದು, ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗಳ ಏಳಿಗೆಗಾಗಿ ನಮ್ಮ ಕೆ.ಆರ್.ಎಸ್ ಪಕ್ಷವನ್ನು ಬೆಂಬಲಿಸಿ ಎಂದರು.
ಈ ವೇಳೆ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್ ಸೇರಿದಂತೆ ಕಾರ್ಯಕರ್ತರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…