ಉತ್ತಮ ಆಡಳಿತಕ್ಕಾಗಿ ಕೆ.ಆರ್.ಎಸ್ ಪಕ್ಷ ಬೆಂಬಲಿಸಿ- ರವಿಕೃಷ್ಣಾ ರೆಡ್ಡಿ

ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.

ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಕೆ.ಆರ್ ಮಾರುಕಟ್ಟೆ ವೃತ್ತದ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಶಾಲಾ ಶುಲ್ಕ ಕಡಿತ , ಆರೋಗ್ಯ ಸೇವೆ ಸೇರಿದಂತೆ ಇತರ ಸೇವೆಗಳನ್ನು ನಮ್ಮ ಪಕ್ಷದ ವತಿಯಿಂದ ಉಚಿತವಾಗಿ ನೀಡುವ ಸಂಕಲ್ಪ ಮಾಡಿದ್ದೇವೆ ಹೀಗಾಗಿ ಜನತೆ ಕೆ.ಆರ್.ಎಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಬೇಕು ಎಂದರು.

ನಮ್ಮ ಪಕ್ಷ ಕಡು ಭ್ರಷ್ಟರ ವಿರುದ್ದ ಹೋರಾಟ ನಡೆಸುತ್ತಿದೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಹಣ, ಹೆಂಡ ಹಂಚಲು ಬಂದಾಗ ಹಿಡುದು ಪ್ರಶ್ನೆ ಮಾಡಬೇಕು, ಹಣವನ್ನು ಸೀಜ್ ಮಾಡಬೇಕು, ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ‌ ಅಪರಾಧ, ಹಣ ಹಂಚಿಕೆ‌ ಎಲ್ಲೇ ಮಾಡಿದರು ಹಿಡಿದು ಪೊಲೀಸರ ಗಮನಕ್ಕೆ ತರಬೇಕು ಎಂದು ತಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ‌ ಮಾಡಲು ಬಂದಿರುವವರು ರಿಯಲ್ ಎಸ್ಟೇಟ್ ಉದ್ಯಮಿಗಳು, ಜೆಸಿಬಿ ಪಕ್ಷಗಳಿಂದ ಸ್ಪರ್ಧೆ ಮಾಡುವವರು ಸಾವಿರಾರು ಕೋಟಿ ರೂಪಾಯಿಗಳ ಒಡೆಯರು, ಈ ಬಾರಿ ನಮ್ಮ ವೋಟುಗಳನ್ನು ಕೊಳ್ಳುವುದಕ್ಕೆ ನಾವು ಬಿಡಬಾರದು, ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗಳ ಏಳಿಗೆಗಾಗಿ ನಮ್ಮ ಕೆ.ಆರ್.ಎಸ್ ಪಕ್ಷವನ್ನು ಬೆಂಬಲಿಸಿ ಎಂದರು.

ಈ ವೇಳೆ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್ ಸೇರಿದಂತೆ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

15 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

17 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

18 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

22 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

24 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago