ಉತ್ತಮ ಆಡಳಿತಕ್ಕಾಗಿ ಕೆ.ಆರ್.ಎಸ್ ಪಕ್ಷ ಬೆಂಬಲಿಸಿ- ರವಿಕೃಷ್ಣಾ ರೆಡ್ಡಿ

ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.

ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಕೆ.ಆರ್ ಮಾರುಕಟ್ಟೆ ವೃತ್ತದ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಶಾಲಾ ಶುಲ್ಕ ಕಡಿತ , ಆರೋಗ್ಯ ಸೇವೆ ಸೇರಿದಂತೆ ಇತರ ಸೇವೆಗಳನ್ನು ನಮ್ಮ ಪಕ್ಷದ ವತಿಯಿಂದ ಉಚಿತವಾಗಿ ನೀಡುವ ಸಂಕಲ್ಪ ಮಾಡಿದ್ದೇವೆ ಹೀಗಾಗಿ ಜನತೆ ಕೆ.ಆರ್.ಎಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಬೇಕು ಎಂದರು.

ನಮ್ಮ ಪಕ್ಷ ಕಡು ಭ್ರಷ್ಟರ ವಿರುದ್ದ ಹೋರಾಟ ನಡೆಸುತ್ತಿದೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಹಣ, ಹೆಂಡ ಹಂಚಲು ಬಂದಾಗ ಹಿಡುದು ಪ್ರಶ್ನೆ ಮಾಡಬೇಕು, ಹಣವನ್ನು ಸೀಜ್ ಮಾಡಬೇಕು, ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ‌ ಅಪರಾಧ, ಹಣ ಹಂಚಿಕೆ‌ ಎಲ್ಲೇ ಮಾಡಿದರು ಹಿಡಿದು ಪೊಲೀಸರ ಗಮನಕ್ಕೆ ತರಬೇಕು ಎಂದು ತಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ‌ ಮಾಡಲು ಬಂದಿರುವವರು ರಿಯಲ್ ಎಸ್ಟೇಟ್ ಉದ್ಯಮಿಗಳು, ಜೆಸಿಬಿ ಪಕ್ಷಗಳಿಂದ ಸ್ಪರ್ಧೆ ಮಾಡುವವರು ಸಾವಿರಾರು ಕೋಟಿ ರೂಪಾಯಿಗಳ ಒಡೆಯರು, ಈ ಬಾರಿ ನಮ್ಮ ವೋಟುಗಳನ್ನು ಕೊಳ್ಳುವುದಕ್ಕೆ ನಾವು ಬಿಡಬಾರದು, ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗಳ ಏಳಿಗೆಗಾಗಿ ನಮ್ಮ ಕೆ.ಆರ್.ಎಸ್ ಪಕ್ಷವನ್ನು ಬೆಂಬಲಿಸಿ ಎಂದರು.

ಈ ವೇಳೆ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್ ಸೇರಿದಂತೆ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

8 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 days ago