ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.
ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಕೆ.ಆರ್ ಮಾರುಕಟ್ಟೆ ವೃತ್ತದ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಶಾಲಾ ಶುಲ್ಕ ಕಡಿತ , ಆರೋಗ್ಯ ಸೇವೆ ಸೇರಿದಂತೆ ಇತರ ಸೇವೆಗಳನ್ನು ನಮ್ಮ ಪಕ್ಷದ ವತಿಯಿಂದ ಉಚಿತವಾಗಿ ನೀಡುವ ಸಂಕಲ್ಪ ಮಾಡಿದ್ದೇವೆ ಹೀಗಾಗಿ ಜನತೆ ಕೆ.ಆರ್.ಎಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಬೇಕು ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲು ಬಂದಿರುವವರು ರಿಯಲ್ ಎಸ್ಟೇಟ್ ಉದ್ಯಮಿಗಳು, ಜೆಸಿಬಿ ಪಕ್ಷಗಳಿಂದ ಸ್ಪರ್ಧೆ ಮಾಡುವವರು ಸಾವಿರಾರು ಕೋಟಿ ರೂಪಾಯಿಗಳ ಒಡೆಯರು, ಈ ಬಾರಿ ನಮ್ಮ ವೋಟುಗಳನ್ನು ಕೊಳ್ಳುವುದಕ್ಕೆ ನಾವು ಬಿಡಬಾರದು, ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗಳ ಏಳಿಗೆಗಾಗಿ ನಮ್ಮ ಕೆ.ಆರ್.ಎಸ್ ಪಕ್ಷವನ್ನು ಬೆಂಬಲಿಸಿ ಎಂದರು.
ಈ ವೇಳೆ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್ ಸೇರಿದಂತೆ ಕಾರ್ಯಕರ್ತರು ಇದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…