ಉತ್ತಮ ಆಡಳಿತಕ್ಕಾಗಿ ಕೆ.ಆರ್.ಎಸ್ ಪಕ್ಷ ಬೆಂಬಲಿಸಿ- ರವಿಕೃಷ್ಣಾ ರೆಡ್ಡಿ

ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.

ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಕೆ.ಆರ್ ಮಾರುಕಟ್ಟೆ ವೃತ್ತದ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಶಾಲಾ ಶುಲ್ಕ ಕಡಿತ , ಆರೋಗ್ಯ ಸೇವೆ ಸೇರಿದಂತೆ ಇತರ ಸೇವೆಗಳನ್ನು ನಮ್ಮ ಪಕ್ಷದ ವತಿಯಿಂದ ಉಚಿತವಾಗಿ ನೀಡುವ ಸಂಕಲ್ಪ ಮಾಡಿದ್ದೇವೆ ಹೀಗಾಗಿ ಜನತೆ ಕೆ.ಆರ್.ಎಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಬೇಕು ಎಂದರು.

ನಮ್ಮ ಪಕ್ಷ ಕಡು ಭ್ರಷ್ಟರ ವಿರುದ್ದ ಹೋರಾಟ ನಡೆಸುತ್ತಿದೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಹಣ, ಹೆಂಡ ಹಂಚಲು ಬಂದಾಗ ಹಿಡುದು ಪ್ರಶ್ನೆ ಮಾಡಬೇಕು, ಹಣವನ್ನು ಸೀಜ್ ಮಾಡಬೇಕು, ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ‌ ಅಪರಾಧ, ಹಣ ಹಂಚಿಕೆ‌ ಎಲ್ಲೇ ಮಾಡಿದರು ಹಿಡಿದು ಪೊಲೀಸರ ಗಮನಕ್ಕೆ ತರಬೇಕು ಎಂದು ತಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ‌ ಮಾಡಲು ಬಂದಿರುವವರು ರಿಯಲ್ ಎಸ್ಟೇಟ್ ಉದ್ಯಮಿಗಳು, ಜೆಸಿಬಿ ಪಕ್ಷಗಳಿಂದ ಸ್ಪರ್ಧೆ ಮಾಡುವವರು ಸಾವಿರಾರು ಕೋಟಿ ರೂಪಾಯಿಗಳ ಒಡೆಯರು, ಈ ಬಾರಿ ನಮ್ಮ ವೋಟುಗಳನ್ನು ಕೊಳ್ಳುವುದಕ್ಕೆ ನಾವು ಬಿಡಬಾರದು, ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗಳ ಏಳಿಗೆಗಾಗಿ ನಮ್ಮ ಕೆ.ಆರ್.ಎಸ್ ಪಕ್ಷವನ್ನು ಬೆಂಬಲಿಸಿ ಎಂದರು.

ಈ ವೇಳೆ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್ ಸೇರಿದಂತೆ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

15 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago