Categories: ಕೋಲಾರ

ಉತ್ತಮ ಆರೋಗ್ಯಕ್ಕೆ ಸರ್ಕಾರದ ಯೋಜನೆಗಳ ಸದುಪಯೋಗವಾಗಬೇಕು: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಆರೋಗ್ಯಕ್ಕೆ ಸಂಬಂಧಿಸಿದಂತೆ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡಿಸಿಕೊಳ್ಳಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ಅಂಜುಮಾನ್ ವಿದ್ಯಾಸಂಸ್ಥೆಯ ಆವರಣದಲ್ಲಿ ಎ.ಜನೈದಿಯಾ ಚಿಶ್ತಿಯಾ ಸಂಘಟನೆ ವತಿಯಿಂದ ಕಲ್ಬುರ್ಗಿಯ ದಿ.ತಾಜ್ ಬಾಬಾ ರವರ ಹೆಸರಿನಲ್ಲಿ ಭಾನುವಾರ ನಡೆದ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಉಚಿತ ಔಷಧೀಯ ವಿತರಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಮನುಷ್ಯ ಆರೋಗ್ಯವಾಗಿರಲು ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಸರಕಾರಗಳು ಯಶಸ್ವಿನಿ, ಆಯುಷ್ಮಾನ್ ಆರೋಗ್ಯ ಕಾರ್ಡ್, ಸೇರಿದಂತೆ ಅನೇಕ ಸೇವೆಗಳನ್ನು ಬಳಸಿಕೊಂಡು ಉತ್ತಮ ಆರೋಗ್ಯವಂತ ಪ್ರಜೆಗಳಾಗಬೇಕು ಎಂದರು.

ಸಮಾಜದಲ್ಲಿ ಸಾರ್ವಜನಿಕರು ನಮ್ಮಂತರ ಜನಪ್ರತಿನಿಧಿಗಳಿಗೆ ಹಾಗೂ ಸರಕಾರವನ್ನು ಹಣ, ಜಮೀನು, ಬಂಗಲೆ ಕೊಡಿ ಅಂತ ಕೇಳಲ್ಲ ಅವರು ಕೇಳೋದು ಒಂದೇ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಕೊಡಿ ಅಂತ ಮಾತ್ರವೇ ಆರೋಗ್ಯದ ಕಾಳಜಿ ಇರೋದರಿಂದ ನಗರದ ಸಮಗ್ರ ಅಭಿವೃದ್ಧಿಗಾಗಿ ಸರಕಾರದಿಂದ ವಿಶೇಷ ಅನುದಾನವನ್ನು ತರಲಾಗಿದೆ. ಮುಂದೆ ನಗರವನ್ನು ಮಾದರಿ ನಗರವಾಗಿ ಮಾಡಲು ಮಾಸ್ಟರ್ ಪ್ಲಾನ್ ಮಾಡಲಾಗಿದೆ ಮೆಡಿಕಲ್ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಸರಕಾರ ಸಿದ್ದವಿದೆ ಶುದ್ದ ಕುಡಿಯುವ ನೀರು ಉತ್ತಮ ರಸ್ತೆಗಳು ಚರಂಡಿ ಸ್ವಚ್ಚತೆಗೆ ಅಧ್ಯತೆ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಆಧುನಿಕತೆ ಬೆಳದಂತೆ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಮನುಷ್ಯ ತನ್ನ ಒತ್ತಡದ ಬದುಕಿನಲ್ಲಿ ಆರೋಗ್ಯಕ್ಕೆ ಒತ್ತು ನೀಡುತ್ತಾ ಇಲ್ಲ ಇಂತಹ ಉಚಿತ ಆರೋಗ್ಯ ಶಿಬಿರಗಳು ಮನುಷ್ಯನಿಗೆ ಉತ್ತಮ ಸಹಕಾರಿಯುತ್ತವೆ ಆರೋಗ್ಯಕ್ಕಾಗಿಯೇ ಕಾಂಗ್ರೆಸ್ ಸರಕಾರವು ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿನ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ 10 ಕೋಟಿ ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 12.50 ಕೋಟಿ, ಹಾಗೂ ಕ್ಯಾಲನೂರುಗೆ 4 ಸೇರಿದಂತೆ ಸುಮಾರು 25 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ತಾಜ್ ಬಾಬಾ ಸಂಸ್ಥೆಯ ಹಜ್ ಬಾಬಾ ಮಾತನಾಡಿ, ಈ ಶಿಬಿರದ ತಪಾಸಣೆಯಲ್ಲಿ ಭಾಗವಹಿಸಿದ ರೋಗಿಗಳು ನಗರದ ವಿಂಗ್ಸ್ ಇ.ಟಿ.ಸಿ.ಎಂ, ವಂಶೋಧಯ, ನಾರಾಯಣ ಹಾಸ್ಪಿಟಲ್, ಆರ್.ಎಲ್.ಜಾಲಪ್ಪ ಆಸ್ಪತ್ರೆ, ಚೌಡೇಶ್ವರಿ ಸೇರಿಂದತೆ ಇನ್ನೂ ಹಲವಾರು ಆಸ್ಪತ್ರೆಗಳು ಪಾಲ್ಗೊಳ್ಳ ಬಹುದು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ನಿಸಾರ್ ಅಹಮದ್, ತಾಜ್ ಬಾಬಾ ಸಂಸ್ಥೆಯ ಸಿರಾಜ್ ಬಾಬಾ, ಹಿರಿಯ ದಲಿತ ಮುಖಂಡ ಸಿ.ಎಂ.ಮುನಿಯಪ್ಪ, ನಗರಸಭೆ ಸದಸ್ಯರಾದ ಅಂಬರೀಷ್, ಅಫ್ಸರ್, ತಾಲೂಕು ಆರೋಗ್ಯ ಅಧಿಕಾರಿ ನಾರಾಯಣಸ್ವಾಮಿ ಮುಖಂಡರಾದ ಅಬ್ದುಲ್ ಖಯ್ಯಾಮ್, ನಿಸಾರ್ ಅಹಮದ್ ಖಾನ್, ಮೈಲಾಂಡಹಳ್ಳಿ ಮುರಳಿ, ಸೀಸಂದ್ರ ಗೋಪಾಲಗೌಡ, ವೈ ಶಿವಕುಮಾರ್, ಇಮ್ರಾನ್, ಅಶ್ವಾಕ್, ರಿಯಾಜ್, ವಾಜೀದ್, ಮನ್ಸೂರ್, ಅಸ್ಸದ್ ಮುಂತಾದವರು ಇದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

6 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

9 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

10 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

18 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago