ಉತ್ತಮ ಆರೋಗ್ಯ ವೃದ್ಧಿಗೆ ಯೋಗ ಸಹಕಾರಿ: ಜಿ.ಪಂ ಸಿಇಒ ವರ್ಣಿತ್ ನೇಗಿ

 

ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ ವತಿಯಿಂದ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯು ನಮ್ಮ ದೇಶದ ಸಾಂಸ್ಕೃತಿಕ ಸಂಪತ್ತನ್ನು ಸೂಚಿಸುತ್ತದೆ. ಆಧುನಿಕ ಯುಗದಲ್ಲಿ ಯೋಗಾಭ್ಯಾಸ ಅತ್ಯವಶ್ಯಕವಾಗಿದೆ. ಯೋಗ ಮಾಡುವುದರಿಂದ ದೈಹಿಕವಾಗಿ ಆಗುವ ಲಾಭವನ್ನು ತಂದೆ-ತಾಯಿಗೆ ತಿಳಿಸಿರಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿ, ಪ್ರತಿಯೊಬ್ಬರು ಯೋಗಾಭ್ಯಾಸ ಮಾಡುವುದನ್ನು ದಿನನಿತ್ಯದ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಯೋಗ ತರಬೇತುದಾರರ ಮಾರ್ಗದರ್ಶನದಲ್ಲಿ 40 ನಿಮಿಷಗಳ ಯೋಗಾಭ್ಯಾಸ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ಅಭಿನಂದನಾ ಪತ್ರ ಹಾಗೂ ಆಯುಷ್ ಇಲಾಖೆಯ ಆರೋಗ್ಯ ಪುಸ್ತಕವನ್ನು ನೀಡಲಾಯಿತು.

ಆಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ. ಖುದ್ಸಿಯ ತಸನೀಮ್ ಎಸ್. ಎ, ಅಧಿಕಾರಿ ನಿರ್ಮಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಪುರಸಭೆ ಮುಖ್ಯಾಧಿಕಾರಿ ದೊಡ್ಡ ಮಲ್ಲಯ್ಯ, ದೈಹಿಕ ಶಿಕ್ಷಣಾಧಿಕಾರಿ ಗಾಯಿತ್ರಿದೇವಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago