ಉತ್ತಮ ಜೀವನ ನಡೆಸಲು ಕೌಶಲ್ಯ ಪ್ರಮುಖ ಪಾತ್ರವಹಿಸುತ್ತದೆ: ಜಿಲ್ಲಾ ಕೌಶಲ್ಯಾಧಿಕಾರಿ ಸಿ.ಜಗನ್ನಾಥ

ಜಾಗತೀಕರಣದ ನಂತರ ದೇಶದಲ್ಲಿ ಎಲ್ಲಾ ಕ್ಷೇತ್ರಗಳು ಅಭಿವೃದ್ಧಿ ಹೊಂದುತ್ತಿರುವುದರಿಂದ ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಗೆ ಹೊಂದಿಕೊಳ್ಳಲು ನಮ್ಮಲ್ಲಿರುವ ಮಾನವ ಸಂಪನ್ಮೂಲವನ್ನು ಕೌಶಲ್ಯ ಭರಿತವಾಗಿಸಬೇಕು. ಭಾರತ ದೇಶದಲ್ಲಿ ಯುವ ಶಕ್ತಿಯ ಸಂಖ್ಯೆ ಅಧಿಕವಾಗಿದೆ. ಗ್ರಾಮಾಂತರ ಜಿಲ್ಲೆಗೆ ಹೆಚ್ಚೆಚ್ಚು ವಿದೇಶಿ ಕಂಪನಿಗಳು ಕಾಲಿಡುತ್ತಿವೆ, ಅವುಗಳ ಸದುಪಯೋಗ ಮಾಡಿಕೊಳ್ಳಬೇಕು. ಒಳ್ಳೆಯ ಜೀವನೋಪಾಯಕ್ಕೆ ಕೌಶಲ್ಯ ಅತಿ ಮುಖ್ಯ ಎಂದು ಕೌಶಲ್ಯಾಭಿವೃದ್ಧಿ ಇಲಾಖೆಯ ಉಪ‌ ನಿರ್ದೇಶಕರಾದ ಸಿ.ಜಗನ್ನಾಥ ಹೇಳಿದರು.

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಪೀಳಿಗೆಗೆ ಆತ್ಮವಿಶ್ವಾಸ ಇರಬೇಕು. ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಮಾಜದಲ್ಲಿ ಸಂವಹನ ನಡೆಸಲು ಕೌಶಲ್ಯ ಬೇಕು ಎಂದು ಹೇಳಿದರು.

ಪ್ರಪಂಚದ ಜೊತೆಗೆ ನಮ್ಮ ಸುತ್ತಮುತ್ತ ನಡೆಯುವ ಪ್ರತಿಯೊಂದು ಆಗುಹೋಗುಗಳನ್ನು ತಿಳಿದುಕೊಂಡಿರಬೇಕು. ಸ್ಪರ್ಧೆಯನ್ನು ಎದುರಿಸಲು ಕೌಶಲ್ಯವನ್ನು ತಳಪಾಯದಿಂದ ಅರಿತುಕೊಳ್ಳಬೇಕು. ಕೌಶಲ್ಯದಿಂದ ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯವನ್ನು ಕಾಣಬಹುದು ಎಂದು ಪ್ರಾಂಶುಪಾಲರಾದ ಡಾ. ಸದಾಶಿವರಾಮಚಂದ್ರ ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆಗಳು ಹಾಗೂ ಕೌಶಲ್ಯ ತರಬೇತಿ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಇಲಾಖೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

12 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

12 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

15 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago