ಜಾಗತೀಕರಣದ ನಂತರ ದೇಶದಲ್ಲಿ ಎಲ್ಲಾ ಕ್ಷೇತ್ರಗಳು ಅಭಿವೃದ್ಧಿ ಹೊಂದುತ್ತಿರುವುದರಿಂದ ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಗೆ ಹೊಂದಿಕೊಳ್ಳಲು ನಮ್ಮಲ್ಲಿರುವ ಮಾನವ ಸಂಪನ್ಮೂಲವನ್ನು ಕೌಶಲ್ಯ ಭರಿತವಾಗಿಸಬೇಕು. ಭಾರತ ದೇಶದಲ್ಲಿ ಯುವ ಶಕ್ತಿಯ ಸಂಖ್ಯೆ ಅಧಿಕವಾಗಿದೆ. ಗ್ರಾಮಾಂತರ ಜಿಲ್ಲೆಗೆ ಹೆಚ್ಚೆಚ್ಚು ವಿದೇಶಿ ಕಂಪನಿಗಳು ಕಾಲಿಡುತ್ತಿವೆ, ಅವುಗಳ ಸದುಪಯೋಗ ಮಾಡಿಕೊಳ್ಳಬೇಕು. ಒಳ್ಳೆಯ ಜೀವನೋಪಾಯಕ್ಕೆ ಕೌಶಲ್ಯ ಅತಿ ಮುಖ್ಯ ಎಂದು ಕೌಶಲ್ಯಾಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಸಿ.ಜಗನ್ನಾಥ ಹೇಳಿದರು.
ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವಪೀಳಿಗೆಗೆ ಆತ್ಮವಿಶ್ವಾಸ ಇರಬೇಕು. ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಮಾಜದಲ್ಲಿ ಸಂವಹನ ನಡೆಸಲು ಕೌಶಲ್ಯ ಬೇಕು ಎಂದು ಹೇಳಿದರು.
ಪ್ರಪಂಚದ ಜೊತೆಗೆ ನಮ್ಮ ಸುತ್ತಮುತ್ತ ನಡೆಯುವ ಪ್ರತಿಯೊಂದು ಆಗುಹೋಗುಗಳನ್ನು ತಿಳಿದುಕೊಂಡಿರಬೇಕು. ಸ್ಪರ್ಧೆಯನ್ನು ಎದುರಿಸಲು ಕೌಶಲ್ಯವನ್ನು ತಳಪಾಯದಿಂದ ಅರಿತುಕೊಳ್ಳಬೇಕು. ಕೌಶಲ್ಯದಿಂದ ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯವನ್ನು ಕಾಣಬಹುದು ಎಂದು ಪ್ರಾಂಶುಪಾಲರಾದ ಡಾ. ಸದಾಶಿವರಾಮಚಂದ್ರ ಅಭಿಪ್ರಾಯಪಟ್ಟರು.
ಈ ಕಾರ್ಯಕ್ರಮದಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆಗಳು ಹಾಗೂ ಕೌಶಲ್ಯ ತರಬೇತಿ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಇಲಾಖೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…