ಉತ್ತಮ ಜೀವನ ನಡೆಸಲು ಕೌಶಲ್ಯ ಪ್ರಮುಖ ಪಾತ್ರವಹಿಸುತ್ತದೆ: ಜಿಲ್ಲಾ ಕೌಶಲ್ಯಾಧಿಕಾರಿ ಸಿ.ಜಗನ್ನಾಥ

ಜಾಗತೀಕರಣದ ನಂತರ ದೇಶದಲ್ಲಿ ಎಲ್ಲಾ ಕ್ಷೇತ್ರಗಳು ಅಭಿವೃದ್ಧಿ ಹೊಂದುತ್ತಿರುವುದರಿಂದ ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಗೆ ಹೊಂದಿಕೊಳ್ಳಲು ನಮ್ಮಲ್ಲಿರುವ ಮಾನವ ಸಂಪನ್ಮೂಲವನ್ನು ಕೌಶಲ್ಯ ಭರಿತವಾಗಿಸಬೇಕು. ಭಾರತ ದೇಶದಲ್ಲಿ ಯುವ ಶಕ್ತಿಯ ಸಂಖ್ಯೆ ಅಧಿಕವಾಗಿದೆ. ಗ್ರಾಮಾಂತರ ಜಿಲ್ಲೆಗೆ ಹೆಚ್ಚೆಚ್ಚು ವಿದೇಶಿ ಕಂಪನಿಗಳು ಕಾಲಿಡುತ್ತಿವೆ, ಅವುಗಳ ಸದುಪಯೋಗ ಮಾಡಿಕೊಳ್ಳಬೇಕು. ಒಳ್ಳೆಯ ಜೀವನೋಪಾಯಕ್ಕೆ ಕೌಶಲ್ಯ ಅತಿ ಮುಖ್ಯ ಎಂದು ಕೌಶಲ್ಯಾಭಿವೃದ್ಧಿ ಇಲಾಖೆಯ ಉಪ‌ ನಿರ್ದೇಶಕರಾದ ಸಿ.ಜಗನ್ನಾಥ ಹೇಳಿದರು.

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಪೀಳಿಗೆಗೆ ಆತ್ಮವಿಶ್ವಾಸ ಇರಬೇಕು. ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಮಾಜದಲ್ಲಿ ಸಂವಹನ ನಡೆಸಲು ಕೌಶಲ್ಯ ಬೇಕು ಎಂದು ಹೇಳಿದರು.

ಪ್ರಪಂಚದ ಜೊತೆಗೆ ನಮ್ಮ ಸುತ್ತಮುತ್ತ ನಡೆಯುವ ಪ್ರತಿಯೊಂದು ಆಗುಹೋಗುಗಳನ್ನು ತಿಳಿದುಕೊಂಡಿರಬೇಕು. ಸ್ಪರ್ಧೆಯನ್ನು ಎದುರಿಸಲು ಕೌಶಲ್ಯವನ್ನು ತಳಪಾಯದಿಂದ ಅರಿತುಕೊಳ್ಳಬೇಕು. ಕೌಶಲ್ಯದಿಂದ ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯವನ್ನು ಕಾಣಬಹುದು ಎಂದು ಪ್ರಾಂಶುಪಾಲರಾದ ಡಾ. ಸದಾಶಿವರಾಮಚಂದ್ರ ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆಗಳು ಹಾಗೂ ಕೌಶಲ್ಯ ತರಬೇತಿ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಇಲಾಖೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

11 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

12 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

12 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

15 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

2 days ago