ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆಗಾಗಿ ಉದ್ಭವ ಬಸವಣ್ಣನಿಗೆ 101 ತೆಂಗಿನಕಾಯಿ ಒಡೆಯುವ ಮೂಲಕ ಹರಕೆ ಕಟ್ಟಿಕೊಂಡ ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥರು.
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಉದ್ಭವ ಬಸವಣ್ಣ ಮೂರ್ತಿ ಇದ್ದು, ಅಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊರಿಗೆ ಊರೇ ಹೋಗಿ ಉದ್ಭವ ಬಸವಣ್ಣ ಮೂರ್ತಿಗೆ 101 ತೆಂಗಿನಕಾಯಿ ಹೊಡೆಯುವ ಮೂಲಕ ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆ ಮಾಡುವಂತೆ ದೇವರ ಮೊರೆ ಹೋದರು.
ಊರಿನ ಪ್ರತಿ ಮನೆ ಮನೆಗೆ ಹೋಗಿ ಅಕ್ಕಿ, ಬೇಳೆ ಸೇರಿದಂತೆ ಪ್ರಸಾದಕ್ಕೆ ಬೇಕಾಗುವ ಸಾಮಾಗ್ರಿಗಳನ್ನು ಕಲೆ ಹಾಕಲಾಗಿತ್ತು. ಪೂಜೆ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.
ತಲೆ ತಲಾಂತರ ಬಂದಂತಹ ಆಚಾರ ವಿಚಾರವಿದು. ಸುಮಾರು ವರ್ಷಗಳಿಂದೆ ನಮ್ಮ ಊರಿನ ಗ್ರಾಮಸ್ಥರೊಬ್ಬರು ಕುರಿ, ಮೇಕೆ, ಹಸು ಮೇಯಿಸಲು ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಹೋದಾಗ ಉದ್ಭವ ಬಸವಣ್ಣ ಮೂರ್ತಿ ಕಂಡುಬಂದಿದೆ. ಅಂದಿನ ರಾತ್ರಿಯೇ ಆತನಿಗೆ ದೇವರು ಕನಸಿಗೆ ಬಂದು ಪ್ರತಿ ವರ್ಷ 101 ತೆಂಗಿನಕಾಯಿ ಹೊಡೆದು ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗಿಸಿದರೆ ನಿಮ್ಮ ಇಷ್ಟಾರ್ಥಸಿದ್ಧಗಳು ನೆರವೇರುತ್ತವೆ ಎಂದು ಹೇಳಲಾಗಿತ್ತಂತೆ. ಆದ್ದರಿಂದ ಅಂದಿನಿಂದ ಇಂದಿನವರೆಗೂ ಆ ಸಂಪ್ರದಾಯವನ್ನು ಊರಿನ ಉದ್ಧಾರಕ್ಕಾಗಿ ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮದ ಯುವಕ ರವಿಕುಮಾರ್ ಹೇಳಿದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…