ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆಗಾಗಿ ಉದ್ಭವ ಬಸವಣ್ಣನಿಗೆ 101 ತೆಂಗಿನಕಾಯಿ ಒಡೆಯುವ ಮೂಲಕ ಹರಕೆ ಕಟ್ಟಿಕೊಂಡ ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥರು.
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಉದ್ಭವ ಬಸವಣ್ಣ ಮೂರ್ತಿ ಇದ್ದು, ಅಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊರಿಗೆ ಊರೇ ಹೋಗಿ ಉದ್ಭವ ಬಸವಣ್ಣ ಮೂರ್ತಿಗೆ 101 ತೆಂಗಿನಕಾಯಿ ಹೊಡೆಯುವ ಮೂಲಕ ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆ ಮಾಡುವಂತೆ ದೇವರ ಮೊರೆ ಹೋದರು.
ಊರಿನ ಪ್ರತಿ ಮನೆ ಮನೆಗೆ ಹೋಗಿ ಅಕ್ಕಿ, ಬೇಳೆ ಸೇರಿದಂತೆ ಪ್ರಸಾದಕ್ಕೆ ಬೇಕಾಗುವ ಸಾಮಾಗ್ರಿಗಳನ್ನು ಕಲೆ ಹಾಕಲಾಗಿತ್ತು. ಪೂಜೆ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.
ತಲೆ ತಲಾಂತರ ಬಂದಂತಹ ಆಚಾರ ವಿಚಾರವಿದು. ಸುಮಾರು ವರ್ಷಗಳಿಂದೆ ನಮ್ಮ ಊರಿನ ಗ್ರಾಮಸ್ಥರೊಬ್ಬರು ಕುರಿ, ಮೇಕೆ, ಹಸು ಮೇಯಿಸಲು ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಹೋದಾಗ ಉದ್ಭವ ಬಸವಣ್ಣ ಮೂರ್ತಿ ಕಂಡುಬಂದಿದೆ. ಅಂದಿನ ರಾತ್ರಿಯೇ ಆತನಿಗೆ ದೇವರು ಕನಸಿಗೆ ಬಂದು ಪ್ರತಿ ವರ್ಷ 101 ತೆಂಗಿನಕಾಯಿ ಹೊಡೆದು ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗಿಸಿದರೆ ನಿಮ್ಮ ಇಷ್ಟಾರ್ಥಸಿದ್ಧಗಳು ನೆರವೇರುತ್ತವೆ ಎಂದು ಹೇಳಲಾಗಿತ್ತಂತೆ. ಆದ್ದರಿಂದ ಅಂದಿನಿಂದ ಇಂದಿನವರೆಗೂ ಆ ಸಂಪ್ರದಾಯವನ್ನು ಊರಿನ ಉದ್ಧಾರಕ್ಕಾಗಿ ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮದ ಯುವಕ ರವಿಕುಮಾರ್ ಹೇಳಿದರು.
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…