ಉತ್ತಮ ಮಳೆ, ಬೆಳೆಗಾಗಿ ಉದ್ಭವ ಬಸವಣ್ಣನಿಗೆ 101‌ ತೆಂಗಿನಕಾಯಿ ಒಡೆದು ಹರಕೆ ಹೊತ್ತ ಗ್ರಾಮಸ್ಥರು

ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆಗಾಗಿ ಉದ್ಭವ ಬಸವಣ್ಣನಿಗೆ 101‌ ತೆಂಗಿನಕಾಯಿ ಒಡೆಯುವ ಮೂಲಕ ಹರಕೆ ಕಟ್ಟಿಕೊಂಡ ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥರು.

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಉದ್ಭವ ಬಸವಣ್ಣ ಮೂರ್ತಿ‌ ಇದ್ದು, ಅಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊರಿಗೆ ಊರೇ ಹೋಗಿ ಉದ್ಭವ ಬಸವಣ್ಣ ಮೂರ್ತಿ‌ಗೆ 101‌ ತೆಂಗಿನಕಾಯಿ ಹೊಡೆಯುವ ಮೂಲಕ ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆ ಮಾಡುವಂತೆ ದೇವರ ಮೊರೆ ಹೋದರು.

ಊರಿನ ಪ್ರತಿ‌ ಮನೆ‌ ಮನೆಗೆ ಹೋಗಿ ಅಕ್ಕಿ, ಬೇಳೆ ಸೇರಿದಂತೆ ಪ್ರಸಾದಕ್ಕೆ ಬೇಕಾಗುವ ಸಾಮಾಗ್ರಿಗಳನ್ನು ಕಲೆ ಹಾಕಲಾಗಿತ್ತು. ಪೂಜೆ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.

ತಲೆ ತಲಾಂತರ ಬಂದಂತಹ ಆಚಾರ ವಿಚಾರವಿದು. ಸುಮಾರು ವರ್ಷಗಳಿಂದೆ ನಮ್ಮ ಊರಿನ ಗ್ರಾಮಸ್ಥರೊಬ್ಬರು ಕುರಿ, ಮೇಕೆ, ಹಸು ಮೇಯಿಸಲು ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಹೋದಾಗ ಉದ್ಭವ ಬಸವಣ್ಣ ಮೂರ್ತಿ‌ ಕಂಡುಬಂದಿದೆ. ಅಂದಿನ ರಾತ್ರಿಯೇ ಆತನಿಗೆ ದೇವರು ಕನಸಿಗೆ ಬಂದು ಪ್ರತಿ ವರ್ಷ  101 ತೆಂಗಿನಕಾಯಿ ಹೊಡೆದು ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗಿಸಿದರೆ ನಿಮ್ಮ ಇಷ್ಟಾರ್ಥಸಿದ್ಧಗಳು ನೆರವೇರುತ್ತವೆ ಎಂದು ಹೇಳಲಾಗಿತ್ತಂತೆ. ಆದ್ದರಿಂದ ಅಂದಿನಿಂದ ಇಂದಿನವರೆಗೂ ಆ ಸಂಪ್ರದಾಯವನ್ನು ಊರಿನ ಉದ್ಧಾರಕ್ಕಾಗಿ ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮದ ಯುವಕ ರವಿಕುಮಾರ್ ಹೇಳಿದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

5 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

19 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

20 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

21 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

21 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 day ago