ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆಗಾಗಿ ಉದ್ಭವ ಬಸವಣ್ಣನಿಗೆ 101 ತೆಂಗಿನಕಾಯಿ ಒಡೆಯುವ ಮೂಲಕ ಹರಕೆ ಕಟ್ಟಿಕೊಂಡ ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥರು.
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಉದ್ಭವ ಬಸವಣ್ಣ ಮೂರ್ತಿ ಇದ್ದು, ಅಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊರಿಗೆ ಊರೇ ಹೋಗಿ ಉದ್ಭವ ಬಸವಣ್ಣ ಮೂರ್ತಿಗೆ 101 ತೆಂಗಿನಕಾಯಿ ಹೊಡೆಯುವ ಮೂಲಕ ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆ ಮಾಡುವಂತೆ ದೇವರ ಮೊರೆ ಹೋದರು.
ಊರಿನ ಪ್ರತಿ ಮನೆ ಮನೆಗೆ ಹೋಗಿ ಅಕ್ಕಿ, ಬೇಳೆ ಸೇರಿದಂತೆ ಪ್ರಸಾದಕ್ಕೆ ಬೇಕಾಗುವ ಸಾಮಾಗ್ರಿಗಳನ್ನು ಕಲೆ ಹಾಕಲಾಗಿತ್ತು. ಪೂಜೆ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.
ತಲೆ ತಲಾಂತರ ಬಂದಂತಹ ಆಚಾರ ವಿಚಾರವಿದು. ಸುಮಾರು ವರ್ಷಗಳಿಂದೆ ನಮ್ಮ ಊರಿನ ಗ್ರಾಮಸ್ಥರೊಬ್ಬರು ಕುರಿ, ಮೇಕೆ, ಹಸು ಮೇಯಿಸಲು ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಹೋದಾಗ ಉದ್ಭವ ಬಸವಣ್ಣ ಮೂರ್ತಿ ಕಂಡುಬಂದಿದೆ. ಅಂದಿನ ರಾತ್ರಿಯೇ ಆತನಿಗೆ ದೇವರು ಕನಸಿಗೆ ಬಂದು ಪ್ರತಿ ವರ್ಷ 101 ತೆಂಗಿನಕಾಯಿ ಹೊಡೆದು ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗಿಸಿದರೆ ನಿಮ್ಮ ಇಷ್ಟಾರ್ಥಸಿದ್ಧಗಳು ನೆರವೇರುತ್ತವೆ ಎಂದು ಹೇಳಲಾಗಿತ್ತಂತೆ. ಆದ್ದರಿಂದ ಅಂದಿನಿಂದ ಇಂದಿನವರೆಗೂ ಆ ಸಂಪ್ರದಾಯವನ್ನು ಊರಿನ ಉದ್ಧಾರಕ್ಕಾಗಿ ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮದ ಯುವಕ ರವಿಕುಮಾರ್ ಹೇಳಿದರು.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…