ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆಗಾಗಿ ಉದ್ಭವ ಬಸವಣ್ಣನಿಗೆ 101 ತೆಂಗಿನಕಾಯಿ ಒಡೆಯುವ ಮೂಲಕ ಹರಕೆ ಕಟ್ಟಿಕೊಂಡ ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥರು.
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಉದ್ಭವ ಬಸವಣ್ಣ ಮೂರ್ತಿ ಇದ್ದು, ಅಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊರಿಗೆ ಊರೇ ಹೋಗಿ ಉದ್ಭವ ಬಸವಣ್ಣ ಮೂರ್ತಿಗೆ 101 ತೆಂಗಿನಕಾಯಿ ಹೊಡೆಯುವ ಮೂಲಕ ಉತ್ತಮ ಮಳೆ, ಬೆಳೆ, ಊರಿನ ಅಭಿವೃದ್ಧಿ, ರಕ್ಷಣೆ ಮಾಡುವಂತೆ ದೇವರ ಮೊರೆ ಹೋದರು.
ಊರಿನ ಪ್ರತಿ ಮನೆ ಮನೆಗೆ ಹೋಗಿ ಅಕ್ಕಿ, ಬೇಳೆ ಸೇರಿದಂತೆ ಪ್ರಸಾದಕ್ಕೆ ಬೇಕಾಗುವ ಸಾಮಾಗ್ರಿಗಳನ್ನು ಕಲೆ ಹಾಕಲಾಗಿತ್ತು. ಪೂಜೆ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.
ತಲೆ ತಲಾಂತರ ಬಂದಂತಹ ಆಚಾರ ವಿಚಾರವಿದು. ಸುಮಾರು ವರ್ಷಗಳಿಂದೆ ನಮ್ಮ ಊರಿನ ಗ್ರಾಮಸ್ಥರೊಬ್ಬರು ಕುರಿ, ಮೇಕೆ, ಹಸು ಮೇಯಿಸಲು ಸಾಸಲು ಚಿನ್ನಮ್ಮನ ಪಾದಾಲು ಬಂಡೆ ಬಳಿ ಹೋದಾಗ ಉದ್ಭವ ಬಸವಣ್ಣ ಮೂರ್ತಿ ಕಂಡುಬಂದಿದೆ. ಅಂದಿನ ರಾತ್ರಿಯೇ ಆತನಿಗೆ ದೇವರು ಕನಸಿಗೆ ಬಂದು ಪ್ರತಿ ವರ್ಷ 101 ತೆಂಗಿನಕಾಯಿ ಹೊಡೆದು ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗಿಸಿದರೆ ನಿಮ್ಮ ಇಷ್ಟಾರ್ಥಸಿದ್ಧಗಳು ನೆರವೇರುತ್ತವೆ ಎಂದು ಹೇಳಲಾಗಿತ್ತಂತೆ. ಆದ್ದರಿಂದ ಅಂದಿನಿಂದ ಇಂದಿನವರೆಗೂ ಆ ಸಂಪ್ರದಾಯವನ್ನು ಊರಿನ ಉದ್ಧಾರಕ್ಕಾಗಿ ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮದ ಯುವಕ ರವಿಕುಮಾರ್ ಹೇಳಿದರು.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…