Categories: ಕೋಲಾರ

ಉತ್ತಮ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ- ನಸೀರ್ ಅಹಮದ್

ಕೋಲಾರ: ಉತ್ತರ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಜ್ಞಾನ ಸಂಪತ್ತನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅಭಿಪ್ರಾಯಪಟ್ಟರು.

ನಗರದ ಮಹಿಳಾ ಸಮಾಜ ಕಾಲೇಜಿನಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಹಿಂದಿನ ಕಾಲದಲ್ಲಿ ಓದಲಿಕ್ಕೆ ಪೂರಕವಾದ ವಾತಾವರಣ ಇರಲಿಲ್ಲ ಇವತ್ತು ಕಣ್ಣು ಮುಂದೆ ತಂತ್ರಜ್ಞಾನವನ್ನು ನೋಡಬಹುದಾದ ಸಂದರ್ಭದಲ್ಲಿ ನಾವು ಇದ್ದೇವೆ ಬೇರೆ ಬೇರೆ ದೇಶಗಳಲ್ಲಿ ನಡೆಯುವ ವಿಚಾರಗಳನ್ನು ನೋಡಬಹುದು ಮೊದಲು ಅಲ್ಲಿಗೆ ಹೋಗಬೇಕಾಗಿತ್ತು ಇವತ್ತು ಇಲ್ಲೇ ಅಂತಹ ಅವಕಾಶಗಳು ಇವೆ ಕಾಲೇಜುಗಳಲ್ಲಿ ಹೊಸ ಹೊಸ ಕೋರ್ಸ್ ಗಳ ಜೊತೆಗೆ ಸೌಲಭ್ಯಗಳನ್ನು ಕೊಡುವ ಕೆಲಸ ನಡೆಯುತ್ತಿದೆ ಎಂದರು.

ಹಿಂದೆ ಕೋಲಾರ ಜಿಲ್ಲೆ ಎಂದರೆ ಸಿವಿಲ್ ಸರ್ವಿಸ್ ಹುದ್ದೆಗಳ ತವರು ಮನೆಯಾಗಿತ್ತು ಎಲ್ಲಾ ಇಲಾಖೆಗಳಲ್ಲಿ ಜಿಲ್ಲೆಯ ಅಧಿಕಾರಿ ವರ್ಗ ಇತ್ತು ಅಂತಹ ಸಂದರ್ಭ ಮತ್ತೆ ಬರಬೇಕಾದರೆ ನೀವು ಎಲ್ಲರೂ ಶಿಸ್ತುನಿಂದ ಕಲಿಯಬೇಕು ಸಾಧನೆ ಮಾಡುವವರು ನಿಮ್ಮಲ್ಲಿ ಸಹ ಇದ್ದಾರೆ ಅದರೆ ಸಾಧಿಸುವ ಛಲ ಬರಬೇಕಾಗಿದೆ ಕಾಲೇಜುಗಳಲ್ಲಿ ಹೆಚ್ಚಾಗಿ ಕೌಶಲ್ಯಕ್ಕೆ ಸಂಬಂಧಿಸಿದ ತರಬೇತಿ ಕೋರ್ಸುಗಳನ್ನು ತೆರೆದು ಓದಿನ ನಂತರ ನೇರವಾಗಿ ಉದ್ಯೋಗ ಸಿಗುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ವಿಧ್ಯಾರ್ಥಿಗಳೇ ದೇಶದ ಆಸ್ತಿಯಾಗಿದ್ದಾರೆ ಗುರುಗಳ ಮಾರ್ಗದರ್ಶನದಲ್ಲಿ ನೀವು ಎಲ್ಲರ ಒಳ್ಳೆಯ ಹೆಸರು ಗಳಿಸಬೇಕು ಸಾಧನೆ ಎಲ್ಲರೂ ಮಾಡಬಹುದು ಅದಕ್ಕೆ ಪರಿಶ್ರಮ ಮುಖ್ಯ ಸಾಧನೆ ಮಾಡಿದಾಗ ನಿಮ್ಮ ತಂದೆತಾಯಿಯ ಜೊತೆಗೆ ವಿದ್ಯೆ ಕಲಿಸಿದ ಗುರುಗಳಿಗೂ ಗೌರವ ಸಿಗುತ್ತದೆ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿಗೆ ಹೆಚ್ಚಿನ ಅಧ್ಯತೆ ನೀಡಲಾಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಶಿಕ್ಷಕರು ಸಹ ದೇಶದ ಪ್ರಥಮ ಪ್ರಜೆಯಾಗಬಹುದು ಎಂಬುದನ್ನು ಸರ್ವಪಲ್ಲಿ ರಾಧಾಕೃಷ್ಣನ್ ತೋರಿಸಿದ್ದಾರೆ ಅವರ ನಡುವಳಿಕೆ ವ್ಯಕ್ತಿತ್ವ ಮತ್ತು ಸಾಧನೆ ನಮಗೆ ಸ್ಪೂರ್ತಿಯಾಗಬೇಕು ಸಾಧನೆ ಮಾಡಿದ ಮಹನೀಯರ ದಾರಿಯಲ್ಲಿ ನಡೆದಾಗ ನಮಗೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಸಮಾಜ ಆಡಳಿತಾಧಿಕಾರಿ ಎಂ.ನವೀನಾ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯರಾದ ರಾಕೇಶ್, ಅಂಬರೀಷ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಜೈದೀಪ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ಗಂಗಣ್ಣ, ಕುರಿಗಳ ರಮೇಶ್ ಅಬ್ದುಲ್ ಖಯ್ಯೂಂ, ಮಹಿಳಾ ಸಮಾಜ ಕಾಲೇಜಿನ ಕಾರ್ಯದರ್ಶಿ ಎಂ.ನಂದನಾ, ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಖಜಾಂಚಿ ಪದ್ಮ, ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಮುಂತಾದವರು ಇದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

7 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

12 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

12 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

20 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago